ಮೈಸೂರಿನಲ್ಲಿ ಮಹಾಮಾರಿ ಕೊರೋನಾಗೆ ಮೂರನೇ ಬಲಿ….

ಮೈಸೂರು,ಜೂ,30,2020(www.justkannada.in):  ರಾಜ್ಯದಲ್ಲಿ ಬೆಂಗಳೂರು, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣಗಳು  ಹೆಚ್ಚಾಗಿ ಕಂಡು ಬರುತ್ತಿದ್ದು ಈ ನಡುವೆ ಮೈಸೂರಿನಲ್ಲಿ ಕೊರೋನಾ ಸೋಂಕಿಗೆ ಓರ್ವ ವ್ಯಕ್ತಿ ಬಲಿಯಾಗಿದ್ದಾನೆ.

ಮೈಸೂರಿನಲ್ಲಿ ಕೊರೋನಾ ವೈರಸ್ ಮೂರನೇ ಬಲಿ ಪಡೆದಿದೆ. ಕೊರೊನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ ವಿಧಾನಸೌಧ ನೌಕರ ಸಾವನ್ನಪ್ಪಿದ್ದಾರೆ. 36 ವರ್ಷದ ವ್ಯಕ್ತಿ ಸರಿ ಕೇಸ್ ಮೂಲಕ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ರಾತ್ರಿ ಕೋವಿಡ್ ಆಸ್ಪತ್ರೆಯಲ್ಲಿ ವ್ಯಕ್ತಿ ನಿಧನರಾಗಿದ್ದಾರೆ.mysore-corona-person-death

ಮೃತವ್ಯಕ್ತಿ ವಿಧಾನಸೌಧದ ಆರ್‌ಡಿಪಿಆರ್ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನೌಕರ ಎಂದು ಹೇಳಲಾಗುತ್ತಿದೆ. ಈ ವ್ಯಕ್ತಿ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಕಂಚಿನಕೆರೆ ಗ್ರಾಮದ ನಿವಾಸಿಯಾಗಿದ್ದು ಮೂರು ದಿನಗಳ ಹಿಂದೆ ಗ್ರಾಮಕ್ಕೆ ಬಂದಿದ್ದರು.

ಇನ್ನು ಅಧಿಕಾರಿಗಳು ಮೃತನ ಟ್ರಾವಲ್ ಹಿಸ್ಟರಿ ಕಲೆ ಹಾಕುತ್ತಿದ್ದಾರೆ. ಮೈಸೂರು ಹಾಗೂ ಬೆಂಗಳೂರಿನಲ್ಲಿ ಕೋವಿಡ್ ಭೀತಿ ಮತ್ತಷ್ಟು ಗಂಭೀರವಾಗಿದ್ದು ಜನ ಭಯಭೀತರಾಗಿದ್ದಾರೆ.

Key words: mysore- Corona-person- death