ಕೋವಿಡ್ ನಿರ್ವಹಣೆ : ಜಿಲ್ಲಾಮಟ್ಟದ ಸಮಿತಿಯಲ್ಲಿ ಮೈಸೂರು ಜಿಲ್ಲಾಧಿಕಾರಿ ಹೆಸರೇ ಇಲ್ಲ..!

ಮೈಸೂರು, ಮೇ 23, 2021 : (www.justkannada.in news ) ಕೊರೋನಾ ಎರಡನೇ ಅಲೆಯ ನಂತರ ಬರಲಿದೆ ಎನ್ನಲಾದ ಸಂಭವನೀಯ ಮೂರನೇ ಅಲೆಯನ್ನು ನಿಭಾಯಿಸಲು ಹಾಗೂ ಮುಂಜಾಗೃತವಾಗಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಭಾನುವಾರ ಪ್ರಕಟಿಸಿದ ಸಮಿತಿಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಕೈಬಿಡಲಾಗಿದೆ.

Kovid case- crossing- 170 borders – Mysore- today-Mysore- DC Rohini Sindhuri.

ಮೈಸೂರು ಸಂಸದ ಪ್ರತಾಪ್ ಸಿಂಹ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್, ಈ ಜಿಲ್ಲಾ ಮಟ್ಟದ ಸಮಿತಿ ರಚಿಸಿ ಪ್ರಕಟಣೆ ನೀಡಿದ್ದಾರೆ. ಆದರೆ ಈ ಸಮಿತಿಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಕೈಬಿಟ್ಟಿರುವುದು ಗಮನಾರ್ಹ. ನಿನ್ನೆಯಷ್ಟೆ ಸಂಸದ ಪ್ರತಾಪಸಿಂಹ, ಜಿಲ್ಲಾಧಿಕಾರಿ ಕಾರ್ಯವೈಖರಿ ಬಗ್ಗೆ ಅಸಮಧಾನ ವ್ಯಕ್ತಪಡಿಸಿ ಹೇಳಿಕೆ ನೀಡಿದ್ದರು. ಬಳಿಕ ಸಂಸದರ ಈ ಹೇಳಿಕೆಯನ್ನು ಉಸ್ತುವಾರಿ ಸಚಿವ ಸೋಮಶೇಖರ್ ಸಮರ್ಥಿಸಿಕೊಂಡಿದ್ದರು. ಇದೀಗ, ಕರೋನಾ 3 ನೇ ಅಲೆ ನಿಭಾಯಿಸಲು ಭಾನುವಾರ ರಚಿಸಲಾಗಿರುವ ಸಮಿತಿಯಲ್ಲಿ ಜಿಲ್ಲಾಧಿಕಾರಿಗೆ ಕೊಕ್ ನೀಡಲಾಗಿದೆ.

mysore-corona-task.force-dc-rohini-sindhoori-name-dropped

ಈ ಸಮಿತಿಯಲ್ಲಿ ಮೈಸೂರು ನಗರ ಪಾಲಿಕೆಯ ಆಯುಕ್ತೆ ಶಿಲ್ಪನಾಗ್, ಚಲುವಾಂಬ ಮಕ್ಕಳ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಸುಧಾ, ವೆಂಟಿಲೇಟರ್ ತಯಾರಿಸುವ ಸ್ಕ್ಯಾನ್ರೇ ಕಂಪನಿಯ ಮುಖ್ಯಸ್ಥ ವಿಶ್ವಪ್ರಸಾದ್ ಆಳ್ವಾ, ಹಾಗೂ ಮಕ್ಕಳ ತಜ್ಞ ವೈದ್ಯರು ಇದ್ದಾರೆ.

 

key words : mysore-corona-task.force-dc-rohini-sindhoori-name-dropped