ಪಾನಿಪುರಿ ತಿನ್ನಲು ಹೋಗಿದ್ದಕ್ಕೆ ಪರಿಶಿಷ್ಟರ ಮೇಲೆ ಹಲ್ಲೆ.

 

ಮೈಸೂರು, ಜ.16, 2022 : (www.justkannada.in news ) ಪಾನಿಪುರಿ ತಿನ್ನಲು ಕೇರಿಗೆ ಬಂದರು ಎಂಬ ಕಾರಣಕ್ಕೆ ಪರಿಶಿಷ್ಟರ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಘಟನೆ ಗುರುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ತಾಲೊಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿರುವುದು. ಹಲ್ಲೆಗೊಳಗಾಗಿರುವ ಸೌಭಾಗ್ಯ, ದಿಲೀಪ, ಚಂದನ, ಮಧುಕರ, ಪ್ರಸನ್ನ ಅವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಗೆ ಕಾರಣರಾದ ಆರು ಮಂದಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಗ್ರಾಮದ ಮೂರ್ತಿ, ಸಚ್ಚಿನ್, ನವೀನ್. ಮಹದೇವಸ್ವಾಮಿ, ಚಂದನ್, ಸಂತೋಷ್ ಬಂಧಿತ ಆರೋಪಿಗಳು.

ಘಟನೆ ವಿವರ:

ದಿಲೀಪ, ಪ್ರಸನ್ನ ಮತ್ತು ಮಧುಕರ ಅವರು ಪಾನಿಪುರಿ ತಿನ್ನಲೆಂದು ಗುರುವಾರ ರಾತ್ರಿ 7.30ಕ್ಕೆ ಕೇರಿಗೆ ತೆರಳಿದ್ದರು. ಅದನ್ನು ಆಕ್ಷೇಪಿಸಿದ್ದ ಮೂರ್ತಿ, ಸಚ್ಚಿನ್ ಹಲ್ಲೆ ನಡೆಸಿದ್ದರು. ನಂತರ ಮುಖಂಡರ ಸಮ್ಮುಖದಲ್ಲಿ ಸಂಧಾನ ನಡೆದಿತ್ತು.


‘ಶುಕ್ರವಾರ ಬೆಳಿಗ್ಗೆ, ಆರೋಪಿಗಳಾದ ಮೂರ್ತಿ, ಸಚ್ಚಿನ್ ಅವರು ದಿಲೀಪ, ಪ್ರಸನ್ನ ಮತ್ತು ಮಧುಕರ ಅವರ ಮನೆಗೆ ನುಗ್ಗಿ ಮತ್ತೆ ಹಲ್ಲೆ ನಡೆಸಿದ್ದರು. ತಡೆಯಲು ಮುಂದಾದ ಸೌಭಾಗ್ಯ ಮತ್ತು ಚಂದನ ಅವರನ್ನೂ ಥಳಿಸಿದ್ದರು.
ಇದೀಗ ಜಾತಿ ನಿಂದನೆ, ಅವಾಚ್ಯ ಶಬ್ದಗಳಿಂದ ನಿಂದನೆ, ಕೊಲೆ ಬೆದರಿಕೆ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ’

key words : Mysore-dalits-assaulted-panipuri-reason-police-arrested-case-registered