ತಾಯಿ ಚಾಮುಂಡೇಶ್ವರಿ ಪಲ್ಲಕ್ಕಿ ರಥ ಎಳೆದು ಹರಕೆ ತೀರಿಸಿದ ಮೈಸೂರು ಡಿಸಿ ರೋಹಿಣಿ ಸಿಂಧೂರಿ…

ಮೈಸೂರು,ಅಕ್ಟೋಬರ್,27,2020(www.justkannada.in): ನಾಡಹಬ್ಬ ಮೈಸೂರು ದಸರಾ ಯಶಸ್ಸಿಗಾಗಿ ಹರಕೆ ಹೊತ್ತಿದ್ದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಮ್ಮ ಕುಟುಂಬ ಸಮೇತ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಹರಕೆ ತೀರಿಸಿದ್ದಾರೆ.mysore-dasara-chamundeshwari-pallakki-mysore-dc-rohini-sindhuri-harake-chariot

ತಂದೆ, ತಾಯಿ, ಪತಿ ಹಾಗೂ ಮಗುವಿನೊಂದಿಗೆ ತಾಯಿ ಚಾಮುಂಡಿಯ ಪಲ್ಲಕ್ಕಿ ರಥ ಎಳೆದು ಡಿಸಿ  ರೋಹಿಣಿ ಸಿಂಧೂರಿ ಹರಕೆ ತೀರಿಸಿದ್ದಾರೆ. ನಿನ್ನೆ ಜಂಬೂಸವಾರಿ ಮೆರವಣಿಗೆ ಮುಗಿಯುತ್ತಿದ್ದಂತೆ ಸಂಜೆ ಚಾಮುಂಡಿ ಬೆಟ್ಟಕ್ಕೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕುಟುಂಬ ತೆರಳಿತ್ತು.mysore-dasara-chamundeshwari-pallakki-mysore-dc-rohini-sindhuri-harake-chariot

ಮೈಸೂರು ದಸರಾ ಹೊತ್ತಿನಲ್ಲೇ ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿ ಆಗಮಿಸಿದ್ದರು. ನಂತರ  ದಸರಾ ಸುಸೂತ್ರವಾಗಿ ನಡೆಯುವಂತೆ ಆಶಿಸಿ ಡಿಸಿ ರೋಹಿಣಿ ಸಿಂಧೂರಿ ಹರಕೆ ಹೊತ್ತಿದ್ದರು. ಬಳಿಕ 9 ದಿನವೂ ಪಲ್ಲಕ್ಕಿ ರಥ ಎಳೆದು ಡಿಸಿ ರೋಹಿಣಿ ಸಿಂಧೂರಿ ಹರಕೆ ತೀರಿಸಿದ್ದಾರೆ.

Key words: mysore-dasara-Chamundeshwari Pallakki – Mysore DC -Rohini Sindhuri –harake- chariot.