ದಸರಾ ಗಜಪಡೆಗೆ ಬೀಳ್ಕೊಡುಗೆ: ನಾಡಿನಿಂದ ಕಾಡಿನತ್ತ ಕ್ಯಾಪ್ಟನ್ ಅಭಿಮನ್ಯು ಅಂಡ್ ಟೀಂ…

ಮೈಸೂರು,ಅಕ್ಟೋಬರ್,28,2020(www.justkannada.in):  ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2020 ವಿಜಯದಶಮಿ ಜಂಬೂಸವಾರಿ ಮೆರವಣಿಗೆಯನ್ನು ಯಶಸ್ವಿಯಾಗಿ ಮುಗಿಸಿದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ಇದೀಗ ನಾಡಿನಿಂದ ಕಾಡಿ‌ನತ್ತ ಪಯಣ ಬೆಳೆಸಿವೆ.jk-logo-justkannada-logo

ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ದಸರಾ ಗಜಪಡೆಗೆ ಪೂಜೆ ನೆರವೇರಿಸಿ ಬಿಳ್ಕೋಡಲಾಯಿತು. ದಸರಾ ಗಜಪಡೆ ಹೊರಡುವ ಮುನ್ನಾ ಕ್ಯಾಫ್ಟನ್ ಅಭಿಮನ್ಯು, ವಿಕ್ರಮ, ಗೋಪಿ, ವಿಜಯ ಮತ್ತು ಕಾವೇರಿ ಆನೆಗಳಿಗೆ ಪೂಜೆ ಸಲ್ಲಿಸಲಾಯಿತು.mysore dasara-gajapde-captain-abhimanyu-elephant-worship-forest

ದಸರಾ ಗಜಪಡೆ ಲಾರಿಗಳನ್ನೇರಿ ಆನೆ ಶಿಬಿರಗಳತ್ತ ತೆರಳುತ್ತಿವೆ. ಮೈಸೂರು ದಸರಾದಲ್ಲಿ ಪಾಲ್ಗೊಳ್ಳಲು ಅಕ್ಟೋಬರ್ 2 ರಂದು ಹುಣಸೂರಿನ ವೀರನಹೊಸಹಳ್ಳಿಯಿಂದ ಮೈಸೂರಿಗೆ ಆಗಮಿಸಿ ಅರಮನೆ ಆವರಣದಲ್ಲಿ ಬೀಡು ಬಿಟ್ಟಿದ್ದ ದಸರಾ ಗಜಪಡೆ ಇದೀಗ ಮೈಸೂರು ದಸರಾ ಜಂಬೂ ಸವಾರಿ ಯಶಸ್ವಿಗೊಳಸಿ ಕಾಡಿನತ್ತ ಹೆಜ್ಜೆ ಹಾಕಿವೆ.

Key words: mysore dasara-gajapde-captain-abhimanyu-elephant-worship-forest