JK EXCLUSIVE ; ಶರತ್ V/S ರೋಹಿಣಿ ಸಿಂಧೂರಿ : ಸಕ್ಷಮ ಪ್ರಾಧಿಕಾರ ಮರು ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳಲು ನಿರ್ದೇಶಿಸಿದ ಸಿಎಟಿ.

ಬೆಂಗಳೂರು, ಮಾ.29, 2021 : (www.justkannada.in news ) ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಬಿ. ಶರತ್ ವರ್ಗಾವಣೆ ಪ್ರಕರಣ, ಹೈಕೋರ್ಟ್ ನಿರ್ದೇಶನದಂತೆ ಸಿಎಟಿಯಿಂದ ತೀರ್ಪು ಪ್ರಕಟ,
ಒಂದು ತಿಂಗಳೊಳಗೆ ಶರತ್ ಅವರನ್ನು ವರ್ಗಾವಣೆ ಮಾಡಿ 2020ರ ಸೆಪ್ಟೆಂಬರ್ 28 ರಂದು ಹೊರಡಿಸಿದ್ದ ಆದೇಶದ ಬಗ್ಗೆ ಸಕ್ಷಮ ಪ್ರಾಧಿಕಾರ ಮರು ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳಲು ನಿರ್ದೇಶನ‌ ಅರ್ಜಿ ಇತ್ಯರ್ಥ.

ಒಟ್ಟು 31 ಪುಟಗಳ ಸುದೀರ್ಘ ಆದೇಶ ಹೊರಡಿಸಿರುವ ಸಿಎಟಿ, ವರ್ಗಾವಣೆ ಆದೇಶದ ಬಗ್ಗೆ ಸರಕಾರವೇ ( ಸಕ್ಷಮ ಪ್ರಾಧಿಕಾರ )  ಮರು ಪರಿಶೀಲನೆ ನಡೆಸಿ ತೀರ್ಮಾನ ತೆಗೆದುಕೊಳ್ಳಲು ಹೇಳಿದೆ.

ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ಅವಧಿಪೂರ್ವ ವರ್ಗಾವಣೆ ಮಾಡಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಅಧಿಕಾರಿ ಬಿ. ಶರತ್ ಸಿಎಟಿಗೆ ಅರ್ಜಿ ಸಲ್ಲಿಸಿದ್ದರು. ತಿಂಗಳುಗಳೇ ಕಳೆದರು ಸಿಎಟಿಯಿಂದ ಯಾವುದೇ ತೀರ್ಪು ಪ್ರಕಟವಾಗಿರಲಿಲ್ಲ. ಇದನ್ನು ಪ್ರಶ್ನಿಸಿ ಶರತ್, ಹೈಕೋರ್ಟ್ ಮೊರೆ ಹೋಗಿದ್ದರು.

mysore-dc-rohini-sindoori-sharath-transfer-high-court-order

ಈ ಹಿನ್ನೆಲೆಯಲ್ಲಿ ಅರ್ಜಿಯನ್ನು ಮುಂದಿನ 2 ವಾರಗಳಲ್ಲಿ ಇತ್ಯರ್ಥಗೊಳಿಸುವಂತೆ ಹೈಕೋರ್ಟ್ ಕೇಂದ್ರ ಆಡಳಿತಾತ್ಮಕ ನ್ಯಾಯಾಧಿಕರಣಕ್ಕೆ (ಸಿಎಟಿ) ಎರಡು ದಿನಗಳ ಹಿಂದೆ ನಿರ್ದೇಶಿಸಿತ್ತು.

ಪ್ರಕರಣವನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಸಿಎಟಿಗೆ ನಿರ್ದೇಶಿಸಬೇಕು ಎಂದು ಕೋರಿ ಅಧಿಕಾರಿ ಬಿ. ಶರತ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ, ಸತೀಶ್ ಚಂದ್ರ ಶರ್ಮಾ ಹಾಗೂ ನ್ಯಾ, ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ಈ ನಿರ್ದೇಶನ ನೀಡಿತ್ತು.
ಪೀಠ ತನ್ನ ತೀರ್ಪಿನಲ್ಲಿ, ಸಿಎಟಿ ರೂಲ್ಸ್-1993 ರ ನಿಯಮ 105ರ ಪ್ರಕಾರ ಕೇಂದ್ರ ಆಡಳಿತಾತ್ಮಕ ನ್ಯಾಯಾಧಿಕರಣ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ ದಿನದಿಂದ 3 ವಾರಗಳ ಒಳಗೆ ಪ್ರಕಟಿಸಬೇಕು. ಪಕ್ಷಗಾರರಿಗೆ ಸೂಚನೆ ಮೂಲಕ ತಿಳಿಸದೇ ಈ ಅವಧಿಯನ್ನು ಬದಲಿಸಲು ಬರುವುದಿಲ್ಲ. ಅದರಂತೆ ಈ ಪ್ರಕರಣದಲ್ಲಿ ಸಿಎಟಿ ಆದೇಶ ಕಾಯ್ದಿರಿಸಿದ ಡಿ.22ರ ನಂತರದ ಮೂರು ವಾರಗಳಲ್ಲಿ ತೀರ್ಪು ಪ್ರಕಟಿಸಬೇಕಿತ್ತು. ಆದರೆ ವಿಳಂಬ ಮಾಡಲಾಗಿದೆ. ಹೀಗಾಗಿ ಮುಂದಿನ 2 ವಾರಗಳಲ್ಲಿ ತೀರ್ಪು ಪ್ರಕಟಿಸಬೇಕು ಎಂದು ನಿರ್ದೇಶಿಸಿತ್ತು.

mysore-dc-rohini-sindoori-sharath-transfer-high-court-order

ಪ್ರಕರಣದ ಹಿನ್ನೆಲೆ :

ಮೈಸೂರು ಜಿಲ್ಲಾಧಿಕಾರಿ ಹುದ್ದೆಗೆ ರೋಹಿಣಿ ಸಿಂಧೂರಿ ನೇಮಕ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಬಿ. ಶರತ್ ಅವರನ್ನು ಅವಧಿಪೂರ್ವ ವರ್ಗಾವಣೆ ಮಾಡಿತ್ತು. 2020ರ ಆಗಸ್ಟ್ 29ರಂದು ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಬಿ. ಶರತ್ ಅವರನ್ನು ಸೆಪ್ಟೆಂಬರ್ 27ರಂದು ತಿಂಗಳು ತುಂಬುವ ಮುನ್ನವೇ ಹುದ್ದೆಯಿಂದ ತೆರವು ಮಾಡಿತ್ತು.
ಅಕ್ಟೋಬರ್ ಮೊದಲ ವಾರದಲ್ಲಿ ಸರ್ಕಾರದ ವರ್ಗಾವಣೆ ಕ್ರಮ ಪ್ರಶ್ನಿಸಿ ಬಿ. ಶರತ್ ಸಿಎಟಿ ಮೆಟ್ಟಿಲೇರಿದ್ದರು. ಸೇವಾ ನಿಯಮಗಳನ್ನು ಉಲ್ಲಂಘಿಸಿ 2 ವರ್ಷ ತುಂಬುವ ಮೊದಲೇ ತನ್ನನ್ನು ವರ್ಗಾವಣೆ ಮಾಡಿರುವ ಸರ್ಕಾರದ ಆದೇಶ ರದ್ದುಪಡಿಸಬೇಕು ಎಂದು ಕೋರಿದ್ದರು. ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಲ್ಲಿಂದ ಹಿಡಿದು ವಾದ ಮಂಡನೆವರೆಗೂ ವಿಳಂಬ ಧೋರಣೆ ಅನುಸರಿಸಿದ್ದ ಸರ್ಕಾರ ಅಂತಿಮವಾಗಿ ಬಿ. ಶರತ್ ಅವರನ್ನು ರೇಷ್ಮೆ ಮಾರುಕಟ್ಟೆ ಮಂಡಳಿ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಆದರೆ ಶರತ್ ಅನಾರೋಗ್ಯ ಕಾರಣ ನೀಡಿ ಅಧಿಕಾರ ಸ್ವೀಕರಿಸದೆ ಉಳಿದಿದ್ದಾರೆ. ಇಂತಹ ಅನಾರೋಗ್ಯಪೀಡಿತ ಅಧಿಕಾರಿಯನ್ನು ಮೈಸೂರು ಡಿಸಿ ಹುದ್ದೆಗೆ ನಿಯೋಜಿಸಲು ಸಾಧ್ಯವಿಲ್ಲ ಎಂದು ತನ್ನ ನಿಲುವು ತಿಳಿಸಿತ್ತು.

Rohini Sindhuri,Transfer,Within,two weeks,Case,disposition,CAT,Suggested,High Court
ಡಿ.22ರಂದು ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ್ದ ಸಿಎಟಿ ತೀರ್ಪನ್ನು ಕಾಯ್ದಿರಿಸಿರುವುದಾಗಿ ತಿಳಿಸಿತ್ತು. ಆದರೆ, ತೀರ್ಪು ಪ್ರಕಟಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಗೆ ರಿಟ್ ಸಲ್ಲಿಸಿದ್ದ ಅಧಿಕಾರಿ ಶರತ್, ಸಿಎಟಿ ರೂಲ್ಸ್ 105ರ ಪ್ರಕಾರ ಕಾಯ್ದಿರಿಸಿದ ತೀರ್ಪನ್ನು ಮೂರು ವಾರಗಳಲ್ಲಿ ಪ್ರಕಟಿಸಬೇಕಿತ್ತು. ಹೀಗಾಗಿ ತೀರ್ಪು ಪ್ರಕಟಿಸಲು ಸಿಎಟಿಗೆ ನಿರ್ದೇಶಿಸಬೇಕು ಎಂದು ಕೋರಿದ್ದರು.

key words : mysore-dc-rohini-sindoori-sharath-transfer-high-court-order