ಮೈಸೂರು ಜಿಲ್ಲೆ ಸಂಪೂರ್ಣ ಲಾಕ್‌ ಡೌನ್ ಮಾಡಿ-ಸಿಎಂ ಬಿಎಸ್ ವೈಗೆ ಮಾಜಿ ಸಚಿವ ಸಾ.ರಾ ಮಹೇಶ್ ಮನವಿ…

kannada t-shirts

ಮೈಸೂರು,ಜು,15,2020(www.justkannada.in):  ಮೈಸೂರು ಜಿಲ್ಲೆಯಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚುತ್ತಿದೆ. ಇದನ್ನ ತಡೆಗಟ್ಟಲು ಮೈಸೂರು ಜಿಲ್ಲೆಯನ್ನ ಸಂಪೂರ್ಣ ಲಾಕ್ ಡೌನ್ ಮಾಡಿ ಎಂದು ಸಿಎಂ ಬಿಎಸ್ ಯಡಿಯೂರಪ್ಪಗೆ ಮಾಜಿ ಸಚಿವ ಸಾ.ರಾ ಮಹೇಶ್ ಆಗ್ರಹಿಸಿದ್ದಾರೆ.

ಈ ಕುರಿತು ಸಿಎಂ ಬಿಎಸ್ ಯಡಿಯೂರಪ್ಪಗೆ ಪತ್ರ ಬರೆದಿರುವ ಶಾಸಕ ಸಾ.ರಾ ಮಹೇಶ್, ಜಿಲ್ಲೆಯಲ್ಲಿ ದಿನೇ ದಿನೇ ಕೊರೋನಾ ಪಾಸಿಟಿವ್ ಸಂಖ್ಯೆ ಹೆಚ್ಚಾಗುತ್ತಿದೆ. ಮೈಸೂರಿನಲ್ಲಿ ಸೋಂಕು ಸಮುದಾಯಕ್ಕೆ ವ್ಯಾಪಕವಾಗಿ ಹರಡುತ್ತಿದೆ. ಅಲ್ಲದೇ ಕೊರೋನಾ ಹೆಚ್ಚಳ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಯಲ್ಲಿ ಲಾಕ್‌ಡೌನ್ ಮಾಡಲಾಗಿದೆ. ಈ ನಡುವೆ ಜಿಲ್ಲೆಯಲ್ಲಿ  ಹರಡುತ್ತಿರುವ ಸೋಂಕು ನಿಯಂತ್ರಣಕ್ಕೆ ಮೈಸೂರು ಜಿಲ್ಲೆ ಲಾಕ್‌ಡೌನ್ ಮಾಡಿ ಎಂದು ಮನವಿ ಮಾಡಿದ್ದಾರೆ.mysore-district-complete-lock-down-former-minister-sa-ra-mahesh-cm-bsy

ಸಿಎಂ ಸೇರಿದಂತೆ ಕಂದಾಯ ಸಚಿವ ಆರ್.ಅಶೋಕ್ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌ಗೂ  ಶಾಸಕ ಸಾ.ರಾ ಮಹೇಶ್  ಪತ್ರ ಬರೆದು ಮನವಿ ಮಾಡಿದ್ದಾರೆ.mysore-district-complete-lock-down-former-minister-sa-ra-mahesh-cm-bsy

ಮೈಸೂರಿನಲ್ಲಿ ಕಳೆದ ಎರಡು ದಿನದಿಂದ ಕೊರೋನಾ ಸೋಂಕಿತರ ಪ್ರಮಾಣ 100ರ ಗಡಿ ದಾಟುತ್ತಿದ್ದು ಜನತೆಯಲ್ಲಿ ಆತಂಕ ಸೃಷ್ಠಿಯಾಗಿದೆ. ಹೀಗಾಗಿ ಜಿಲ್ಲೆ ಸಂಪೂರ್ಣ ಲಾಕ್ ಡೌನ್ ಗೆ ಸಾ.ರಾ ಮಹೇಶ್ ಆಗ್ರಹಿಸಿದ್ದಾರೆ.

Key words: Mysore -district –complete- lock down-Former minister- SA.RA Mahesh – CM BSY.

website developers in mysore