ಕಾಂಗ್ರೆಸ್ ತೊರೆದು ಅಧಿಕೃತವಾಗಿ ಬಿಜೆಪಿ ಸೇರಿದ ಮಾಜಿ ಸಂಸದ ಸಿ.ಹೆಚ್ ವಿಜಯ್ ಶಂಕರ್..

ಬೆಂಗಳೂರು,ನ,5,2019(www.justkannada.in):  ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡು ನಂತರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದ ಮಾಜಿ ಸಂಸದ ಸಿ.ಹೆಚ್. ವಿಜಯ್ ಶಂಕರ್ ಇದೀಗ ಮತ್ತೆ ಕಮಲ ಮುಡಿದಿದ್ದಾರೆ.

ಹೌದು ಇಂದು ಬೆಂಗಳೂರಿನಲ್ಲಿರುವ ಬಿಜೆಪಿ ಕಚೇರಿಯಲ್ಲಿ  ಸಿಹೆಚ್ ವಿಜಯ್ ಶಂಕರ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು. ಸಿ.ಹೆಚ್ ವಿಜಯ್ ಶಂಕರ್ ರನ್ನ ಸಿಎಂ ಬಿಎಸ್ ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷ  ನಳಿನ್ ಕುಮಾರ್ ಕಟೀಲ್ ಅವರು ಪಕ್ಷದ ಬಾವುಟ ನೀಡಿ ಬರ ಮಾಡಿಕೊಂಡರು. ‘

ಇದೇ ವೇಳೆ ಮಾತನಾಡಿದ ಅವರು ಪಕ್ಷ ನನಗೆ ಯಾವುದೇ ಜವಾಬ್ದಾರಿ ನೀಡಿದರು ನಿಭಾಯಿಸುತ್ತೇನೆ. ಹುಣಸೂರು ಉಪ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುವುದು ನನ್ನ ಗುರಿ. ಹುಣಸೂರು ಉಪ ಚುನಾವಣೆ ನನ್ನ ಪ್ರತಿಷ್ಠೆಯ ವಿಚಾರವಾಗಿದೆ. ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತೇನೆ ಎಂದು ಸಿ ಹೆಚ್ ವಿಜಯ್ ಶಂಕರ್ ತಿಳಿಸಿದರು.

ಇದೇ ಸಮಯದಲ್ಲಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ,  ಬಹಳ ದಿನದಿಂದ ಮತ್ತೆ ಬಿಜೆಪಿಗೆ ಬರುವುದಾಗಿ ವಿಜಯ್ ಶಂಕರ್ ಕೇಳಿದ್ದರು. ಈ ಬಗ್ಗೆ ನಾನು ಮತ್ತೆ ನಳೀನ್ ಕುಮಾರ್ ಕಟೀಲ್ ಚರ್ಚಿಸಿದ್ದವು. ಇದೀಗ ವಿಜಯ್ ಶಂಕರ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು ಪಕ್ಷ  ಗಟ್ಟಿಗೊಳಿಸುವ ನಿಟ್ಟಿನಲ್ಲಿ ಸಹಕಾರಿಯಾಗಲಿದೆ. ಮೈಸೂರು ಭಾಗದ ಕೆಲಸಗಳನ್ನ ಮಾಡಿಕೊಡುತ್ತೇನೆ ಎಂದು ಹೇಳಿದರು.

Key words:  mysore-Former MP- CH Vijay Shankar –join- BJP