ಸಾಂಸ್ಕೃತಿಕ ನಗರಿ ಮೈಸೂರಿನ ನಾಲ್ವರಿಗೆ ಒಲಿದ  ಕನ್ನಡ ರಾಜ್ಯೋತ್ಸವ ಪ್ರಶಸ್ತಿ…

ಮೈಸೂರು,ಅ,28,2019(www.justkannada.in):  ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 64 ಮಂದಿ ಗಣ್ಯರು ಭಾಜನರಾಗಿದ್ದಾರೆ. ಈ ಪೈಕಿ ಮೈಸೂರಿನ ನಾಲ್ವರಿಗೆ ಈ ಭಾರಿಯ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ.

ಈ ಸಾಲಿನ ರಾಜ್ಯೊತ್ಸವ ಪ್ರಶಸ್ತಿ ಪಟ್ಟಿಯನ್ನ ರಾಜ್ಯ ಸರ್ಕಾರ ಇಂದು ಬಿಡುಗಡೆ ಮಾಡಿತು.  ಸಾಂಸ್ಕೃತಿಕ ನಗರಿ ಮೈಸೂರಿನ ನಾಲ್ವರು ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶಿಲ್ಪಕಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮೈಸೂರಿನ ವಿ. ಎ ದೇಶಪಾಂಡೆ, ಯೋಗ ಕ್ಷೇತ್ರದಲ್ಲಿ ವಿಶ್ವದಾಖಲೆ ನಿರ್ಮಿಸಿದ ಕುಮಾರಿ ಖುಷಿ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಡಾ. ಕೆ ಚಿದಾನಂದಗೌಡರಿಗೆ ಮತ್ತು ರಂಗಭೂಮಿ ಕ್ಷೇತ್ರದಲ್ಲಿ ಎಚ್ ಕೆ ರಮಾನಾಥ್ ಗೆ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ.

Key words: Mysore –four-members- Kannada Rajyotsava Award