ಅಡುಗೆ ಗ್ಯಾಸ್ ಸಿಲಿಂಡರ್ ಸ್ಪೋಟ: ಪ್ರಾಣಾಪಾಯದಿಂದ ಪಾರಾದ ಕುಟುಂಬಸ್ಥರು…

ಮೈಸೂರು,ಸೆ,27,2019(www.justkannada.in): ಅಡುಗೆ ಗ್ಯಾಸ್ ಸಿಲೀಂಡರ್ ಸ್ಪೋಟವಾಗಿ ಸ್ಪೋಟದ ತೀವ್ರತೆಗೆ ಮನೆ ಸಂಪೂರ್ಣವಾಗಿ ಹಾನಿಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್ ನಗರ ತಾಲ್ಲೂಕಿನಲ್ಲಿ ನಡೆದಿದೆ.

ಕೆ.ಆರ್. ನಗರ ತಾಲ್ಲೂಕಿನ ಭೇರ್ಯಾ ಗ್ರಾಮದಲ್ಲಿ  ಈ ಘಟನೆ ನಡೆದಿದೆ. ಗ್ರಾಮದ ಹಣ್ಣಿನ ವ್ಯಾಪಾರಿ ಮಹದೇವ್ ಅವರಿಗೆ ಸೇರಿದ್ದ  ಮನೆಯಲ್ಲಿ ಈ ಘಟನೆ ಸಂಭವಿಸಿದೆ. ಸಿಲಿಂಡರ್ ಸ್ಪೋಟಗೊಳ್ಳುತ್ತಿದ್ದಂತೆ ಮನೆಯಲ್ಲಿದ್ದ ಕುಟುಂಬಸ್ಥರು ಮನೆಯಿಂದ ಹೊರ ಓಡಿ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೂಡಲೇ ಕೆ.ಆರ್.ನಗರ ಅಗ್ನಿಶಾಮಕ ಠಾಣೆಗೆ ಈ ವಿಚಾರ ತಿಳಿಸಲಾಗಿದ್ದು ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿ ಉರಿಯುತ್ತಿರುವ ಬೆಂಕಿ ನಂದಿಸಲು ಯಶಸ್ವಿಯಾಗಿದ್ದಾರೆ. ಮನೆಯವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.

Key words: mysore- gas cylinder- blast-escaped -danger