ಮೈಸೂರು ಕೆ.ಆರ್.ಆಸ್ಪತ್ರೆಯಲ್ಲಿ ಪೈಶಾಚಿಕ ಕೃತ್ಯ: ಬುದ್ದಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ.

ಮೈಸೂರು,ಜುಲೈ,10,2021(www.justkannada.in):  ಅಪರಿಚಿತ ವ್ಯಕ್ತಿಯೊಬ್ಬ ಆಸ್ಪತ್ರೆ ವಾರ್ಡ್ ನಲ್ಲೇ ಬುದ್ದಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ನಡೆಸಿರುವ ಪೈಶಾಚಿಕ ಕೃತ್ಯ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ನಡೆದಿದೆ.jk

30 ವರ್ಷದ ಮಹಿಳೆ ಮೇಲೆ ಈ ಅಮಾನುಷ ಕೃತ್ಯ  ನಡೆದಿದೆ. ರಾತ್ರಿ ವೇಳೆ ಆಸ್ಪತ್ರೆಯ ವಾರ್ಡ್ ಕಿಟಕಿ ಗ್ರಿಲ್ ಕಿತ್ತು ಒಳ ನುಗ್ಗಿ ಅಪರಿಚಿತ ವ್ಯಕ್ತಿಯೊಬ್ಬ ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾನೆ.

ಮಾನವ ಹಕ್ಕುಗಳ ಸೇವಾ ಸಮಿತಿಯಿಂದ  ಈ ಪ್ರಕರಣ ಬೆಳಕಿಗೆ ಬಂದಿದ್ದು, ಬುದ್ದಿಮಾಂದ್ಯ ಮಹಿಳೆ ಇದ್ಧ ಅದೇ ವಾರ್ಡ್ ನ ವೃದ್ದೆಯಿಂದ ಸತ್ಯ ಬಯಲಾಗಿದೆ. ಅತ್ಯಾಚಾರದ ಬಗ್ಗೆ ವೃದ್ಧೆ ವಾರದ ಹಿಂದೆಯೇ ವೈದ್ಯರಿಗೆ ಮಾಹಿತಿ ನೀಡಿದ್ದರು. ಆದರೆ ಮಾಹಿತಿ ನೀಡಿದ ವೃದ್ಧೆಗೆ ಆಸ್ಪತ್ರೆ ಸಿಬ್ಬಂದಿ ಹಲ್ಲೆ ಮಾಡಿ ಬಾಯಿ ಬಿಡದಂತೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಅತ್ಯಾಚಾರದ ಬಗ್ಗೆ ವೃದ್ಧೆ ಮಾಹಿತಿ ನೀಡಿದರೂ ವೈದ್ಯರು ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದ್ದು, ಅತ್ಯಾಚಾರ ಪ್ರಕರಣ ಮುಚ್ಚಿ ಹಾಕಲು ಕೆ‌.ಆರ್.ಆಸ್ಪತ್ರೆ ವೈದ್ಯರು ಯತ್ನಿಸಿದರಾ ಎಂಬ ಪ್ರಶ್ನೆ ಮೂಡಿದೆ.

ಈ ಬಗ್ಗೆ ಮಾನವ ಹಕ್ಕುಗಳ ಸೇವಾ ಸಮಿತಿ ನೀಡಿದ ಮಾಹಿತಿಯಿಂದ ಪೊಲೀಸರು ಆಸ್ಪತ್ರೆಗೆ ದೌಡಾಯಿಸಿದ್ದು, ವಿಷಯ ಬಹಿರಂಗವಾಗುತ್ತಿದ್ದಂತೆ ಆಸ್ಪತ್ರೆ ಭದ್ರತಾ ಸಿಬ್ಬಂದಿ ಪರಾರಿಯಾಗಿದ್ದಾರೆ. ಪೊಲೀಸರು ಬಂದರೂ ಸಹ ಸ್ಥಳಕ್ಕೆ ವೈದ್ಯರು ಬಂದಿಲ್ಲ. ಅಲ್ಲಿದ್ಧ ನರ್ಸ್ ಗಳು ಜಾಗ ಖಾಲಿ ಮಾಡಿದ್ದಾರೆ ಎನ್ನಲಾಗಿದೆ. ಇನ್ನು ಅಮಾನವೀಯ ಕೃತ್ಯ ಕೇಳಿ ನೆರೆ ಹೊರೆ ವಾರ್ಡ್ ನ ರೋಗಿಗಳ ಪೋಷಕರು ಬೆಚ್ಚಿ ಬಿದ್ದಿದ್ದಾರೆ.

Key words: Mysore – KR Hospital-Rape – woman