ಬಿದ್ದ ಬೆಂಕಿಯಲ್ಲಿ ಕೈ ಕಾಯಿಸಿಕೊಳ್ಳುವುದು ದೇವೆಗೌಡರ ಸ್ವಭಾವ: ಸಿದ್ಧರಾಮಯ್ಯರನ್ನ ಸತ್ತಕೋಳಿ ಎಂದ ಸಂಸದ ಶ್ರೀನಿವಾಸ್ ಪ್ರಸಾದ್…

kannada t-shirts

ಮೈಸೂರು,ಡಿಸೆಂಬರ್,21,2020(www.justkannada.in): ಜೆಡಿಎಸ್ ವಿಲೀನ ವಿಚಾರ ದೇವೆಗೌಡರೇ ತೀರ್ಮಾನ ಮಾಡಿದಂತಿದೆ‌. ದೇವೆಗೌಡರಿಗೆ ನಾನು‌ ವೈಯುಕ್ತಿಕವಾಗಿ ಸಲಹೆ ಕೊಡಲ್ಲ. ಯಾಕಂದ್ರೆ ದೇವೆಗೌಡರು ಯಾವಾಗ ಏನ್ ತೀರ್ಮಾನ ಮಾಡ್ತಾರೋ ಯಾರಿಗೂ ಗೊತ್ತಾಗಲ್ಲ. ಬಿದ್ದ ಬೆಂಕಿಯಲ್ಲಿ ಕೈ ಕಾಯಿಸಿಕೊಳ್ಳುವುದು ದೇವೆಗೌಡರ ಸ್ವಭಾವ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಟೀಕಿಸಿದ್ದಾರೆ.Teachers,solve,problems,Government,bound,Minister,R.Ashok

ಮೈಸೂರಿನಲ್ಲಿ ಇಂದು ಮಾತನಾಡಿದ  ಸಂಸದ ವಿ‌.ಶ್ರೀನಿವಾಸ್ ಪ್ರಸಾದ್, ಬಿಜೆಪಿ ಮತ್ತು ಜೆಡಿಎಸ್ ಸದ್ಯದ ಸ್ಥಿತಿಯಲ್ಲಿ ವಿಲೀನ ಕಷ್ಟ ಸಾಧ್ಯ. ವಿಲೀನ, ಹೊಂದಾಣಿಕೆ ಸ್ವರೂಪದ ಬಗ್ಗೆ ನನಗೆ ಮಾಹಿತಿ ಇಲ್ಲ. ಆದ್ರೆ ಜೆಡಿಎಸ್‌ಗೆ ಹತಾಶ ಸ್ಥಿತಿ ಇದೆ. ಬಿಜೆಪಿ ಜೊತೆ ಬರುವುದು ಜೆಡಿಎಸ್‌ ಗೆ ಅನಿವಾರ್ಯ ಇದೆ. ಜೆಡಿಎಸ್‌ ತನ್ನ ನೆಲೆಗಳಲ್ಲೇ ಸೋಲು ಕಂಡಿದೆ. ತುಮಕೂರಿನಲ್ಲಿ ಸ್ವತಃ ದೇವೆಗೌಡರೆ ಸೋತರು. ರಾಜಕೀಯ ಭವಿಷ್ಯಕ್ಕಾಗಿ ಅವರು ಬಿಜೆಪಿ ಜೊತೆ ಹೊಂದಾಣಿಕೆ ಅನಿವಾರ್ಯ ಎಂದರು.

ಜೆಡಿಎಸ್ ವಿಲೀನ ವಿಚಾರ ದೇವೆಗೌಡರೇ ತೀರ್ಮಾನ ಮಾಡಿದಂತಿದೆ‌. ಕಾಂಗ್ರೆಸ್‌ ಮೈತ್ರಿಯಿಂದ ಹೊರ ಬಂದಿದ್ದಾರೆ. ದೇವೆಗೌಡರಿಗೆ ನಾನು‌ ವೈಯುಕ್ತಿಕವಾಗಿ ಸಲಹೆ ಕೊಡಲ್ಲ. ಯಾಕಂದ್ರೆ ದೇವೆಗೌಡ್ರು ಯಾವಾಗ ಏನ್ ತೀರ್ಮಾನ ಮಾಡ್ತಾರೋ ಯಾರಿಗೂ ಗೊತ್ತಾಗಲ್ಲ. ಬಿದ್ದ ಬೆಂಕಿಯಲ್ಲಿ ಕೈ ಕಾಯಿಸಿಕೊಳ್ಳುವುದು ದೇವೆಗೌಡರ ಸ್ವಭಾವ. ಹೊಂದಾಣಿಕೆ ವಿಚಾರದಲ್ಲಿ ಹೈಕಮಾಂಡ್‌ ಅವರದ್ದೇ ಅಂತಿಮ. ಕೇವಲ ಎರಡು ಮೂರು ಜಿಲ್ಲೆಗೆ ಸೀಮಿತವಾಗಿರುವ ಜೆಡಿಎಸ್‌ ಗೆ ಸಿಎಂ ಸ್ಥಾನ ಬಿಟ್ಟುಕೊಡೋಕೆ ಆಗುತ್ತಾ..? ಎಂದು  ಜೆಡಿಎಸ್ ಜೊತೆ ಮೈತ್ರಿಗೆ ಅಸಮಾಧಾನ‌ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಹತಾಶನಾಗಿ ಸತ್ತ ಕೋಳಿಯಂತಾಗಿದ್ದಾನೆ‌.

ಇದೇ ವೇಳೆ ಒಳ ಒಪ್ಪಂದದಿಂದ ನನ್ನನ್ನ ಸೋಲಿಸಿದ್ರು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಸಂಸದ ಶ್ರೀನಿವಾಸ್ ಪ್ರಸಾದ್, ಸಿದ್ದರಾಮಯ್ಯನವ್ರೇ ನಿಮಗೆ ಈಗ ಸೋಲಿನ ಕಹಿ ಅರ್ಥ ಆಯ್ತ. ನಾನು ನಂಜನಗೂಡು ಉಪ ಚುನಾವಣೆಯಲ್ಲಿ ಸೋತ ಮರುದಿನವೇ ಹೇಳಿದ್ದೆ ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಸೋಲ್ತಾರೆ ಅಂತ. ಬೆಕ್ಕು ಕಣ್ಮುಚ್ಚಿಕೊಂಡು ಹಾಲು ಕುಡಿದ್ರೆ ಜಗತ್ತಿಗೆ ಕಾಣಲ್ಲ ಅನ್ಕೊಂಡಿದ್ದೀರ…? ಸಿದ್ದರಾಮಯ್ಯ ಹತಾಶನಾಗಿ ಸತ್ತ ಕೋಳಿಯಂತಾಗಿದ್ದಾನೆ‌. ಸತ್ತಕೋಳಿ ಬೆಂಕಿಗೆ ಹೆದರುವಂತಾಗಿದೆ ಸಿದ್ದರಾಮಯ್ಯನ ಸದ್ಯದ ಸ್ಥಿತಿ ಎಂದು ಲೇವಡಿ ಮಾಡಿದರು.mysore-mp-shrinivas-prasad-outrage-bjp-jds-alliance-hd-devegowada-siddaramaiah

ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ, ಮಹದೇವಪ್ಪನ ದರ್ಪ ದುರಹಂಕಾರ ಈ ಪರಿಸ್ಥಿತಿಗೆ ಕೊಂಡೊಯ್ದಿದೆ‌. ಕಾಂಗ್ರೆಸ್‌ ನಲ್ಲಿ ಸಿದ್ದರಾಮಯ್ಯ ವಿರೋಧಿಸುವವರಿದ್ದಾರೆ. ಈಗಾಗಲೇ ಉಪ ಚುನಾವಣೆಗಳಲ್ಲಿನ ಕಾಂಗ್ರೆಸ್  ಪತನದ ಹಾದಿ ಹಿಡಿದಿದೆ ಎಂದು ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ನಡೆಸಿದರು.

Key words: mysore- MP-shrinivas Prasad-outrage-bjp-jds- alliance-HD devegowada-siddaramaiah

website developers in mysore