ರಸ್ತೆ ಅಪಘಾತದಲ್ಲಿ ವ್ಯಕ್ತಿ ಮೃತ : ಬಾರ್ ಮುಂದೆ ಶವವಿಟ್ಟು ಗ್ರಾಮಸ್ಥರ ಪ್ರತಿಭಟನೆ….

ಮೈಸೂರು,ನವೆಂಬರ್,27,2020(www.justkannada.in):  ಬಾರ್‌ ಎದುರು ರಸ್ತೆ ಅಪಘಾತದಲ್ಲಿ ವ್ಯಕ್ತಿಯೋರ್ವ ಮೃತಪಟ್ಟ ಹಿನ್ನೆಲೆ ಗ್ರಾಮಸ್ಥರು  ಬಾರ್‌ ಮುಂದೆಯೇ ಶವವಿಟ್ಟು ಪ್ರತಿಭಟನೆ ನಡೆಸಿದ  ಘಟನೆ ಮೈಸೂರಿನಲ್ಲಿ ನಡೆದಿದೆ.I didn't knew CM BSY will think so cheaply - KPCC President D.K. Shivakumar

ರಮ್ಮನಹಳ್ಳಿ ಗ್ರಾಮದ ನಿವಾಸಿ ಮಹದೇವು ಮೃತಪಟ್ಟವರು. ಗುರುವಾರ ರಾತ್ರಿ ಬಾರ್‌ ಗೆ ತೆರಳಿ ಹಿಂದಿರುಗುವ ವೇಳೆ ಮೈಸೂರಿನಿಂದ ಮಹದೇವಪುರ ಮಾರ್ಗವಾಗಿ ತೆರಳುತ್ತಿದ್ದ ಕಾರೊಂದು ಡಿಕ್ಕಿಹೊಡೆದ ಪರಿಣಾಮ ಮಹದೇವು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.mysore- Person –death-road accident –villagers- protest- in front of - bar.

ಮಹದೇವಪುರ ಮುಖ್ಯ ರಸ್ತೆ ರಮ್ಮನಹಳ್ಳಿ, ಕಾಳಿಸಿದ್ದನಹುಂಡಿ ಗ್ರಾಮಗಳಿಗೆ ಹೊಂದಿಕೊಂಡಂತಿರುವ ಉಗ್ರನರಸಿಂಹ ವೈನ್‌ ಶಾಪ್‌ ಗೆ  ತೆರಳಿ ವಾಪಸ್ ಆಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ  ಬಾರ್‌ ನಿಂದಲೇ ಈ ಅವಘಡ ಸಂಭವಿಸಿದೆ ಎಂದು ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಬಾರ್‌ ಎದುರು ಮೃತ ಮಹದೇವು ಶವವಿಟ್ಟು ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಕೂಡಲೇ ಬಾರ್‌ ಮುಚ್ಚುವಂತೆ ಆಗ್ರಹಿಸಿದರು.

Key words: mysore- Person –death-road accident –villagers- protest- in front of – bar.