ಸೇತುವೆಯಿಂದ ಹಾರಿ ದ್ವಿತೀಯ ಪಿಯು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು…

ಮೈಸೂರು,ಜು,21,2020(www.justkannada.in): ದ್ವಿತೀಯ ಪಿಯು ವಿಧ್ಯಾರ್ಥಿನಿ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.jk-logo-justkannada-logo

ಕೆ.ಆರ್.ಎಸ್.ಬಳಿ ಇರುವ ಸಾಗರಕಟ್ಟೆ ಸೇತುವೆಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಗುಂಗ್ರಾಲ್ ಛತ್ರದ ನಿವಾಸಿ ಭಾವನ(17)ಆತ್ಮಹತ್ಯೆಗೆ ಶರಣಾದ ವಿಧ್ಯಾರ್ಥಿನಿ. ಭಾವನ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಫೇಲ್ ಆಗಿದ್ದಳು. ಈ ನಡುವೆ ಚಿಕ್ಕಪ್ಪನ ಮನೆಗೆ ಹೋಗಿ ಬರುವುದಾಗಿ  ಹೇಳಿ ಮನೆ ಬಿಟ್ಟಿದ್ದಳು.mysore-pu-student-succide-bridge

ಆದರೆ ಸಂಜೆ ಸಾಗರಕಟ್ಟೆ ಹಿನ್ನೀರಿನಲ್ಲಿ ಭಾವನಳ ಮೃತದೇಹ ಪತ್ತೆಯಾಗಿದೆ. ಈ ಕುರಿತು ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: mysore- PU Student-succide-bridge