ಮದುವೆ ದಿಬ್ಬಣದ ಬಸ್ ಮತ್ತು ಲಾರಿ ನಡುವೆ ಭೀಕರ ರಸ್ತೆ ಅಪಘಾತ: ಇಬ್ಬರು ಸಾವು…

ಮೈಸೂರು,ಆ,21,2019(www.justkannada.in): ಮದುವೆ ಮುಗಿಸಿ ವಾಪಸ್ ತೆರಳುತ್ತಿದ್ದ ವೇಳೆ ಮದುವೆ ದಿಬ್ಬಣದ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ಟಿ. ನರಸೀಪುರ ರಸ್ತೆಯ ಗರ್ಗೆಶ್ವರಿ ಬಳಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮದುವೆ ಬಸ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದರೇ  10 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಟಿ. ನರಸೀಪುರ ಪಟ್ಟಣದ ಚಿಕ್ಕಮ್ಮ ತಾಯಿ ಛತ್ರದಲ್ಲಿ ಮದುವೆ ಮುಗಿಸಿ ನರಸೀಪುರದ ಚೋರನಹಳ್ಳಿಗೆ ವಾಪಾಸ್ ಹೋಗುವಾಗ ಈ ಅವಘಡ ಸಂಭವಿಸಿದೆ.  ಮದುವೆ ಮುಗಿಸಿ ವಾಪಸ್ ಮನೆಗೆ ಸೇರಬೇಕಾದವರು ಮಸಣ ಸೇರಿದ್ದಾರೆ. ಸ್ಥಳಕ್ಕೆ ಟಿ. ನರಸೀಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.

Key words: mysore- road accident-t between – bus – lorry- wedding- two death