ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ : ಶಾಲೆ ಅಡುಗೆ ಸಿಬ್ಬಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಶಿಕ್ಷಕ: ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ…

ಮೈಸೂರು,ಡಿ,16,2019(www.justkannada.in): ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕ ಶಾಲೆ ಅಡುಗೆ ಸಿಬ್ಬಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಶಿಕ್ಷಕನ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಿತ್ತೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯ ಶಿಕ್ಷಕ ಕೃಷ್ಣಮೂರ್ತಿ ವಿರುದ್ದವೇ ಆರೋಪ ಕೇಳಿ ಬಂದಿರುವುದು. ಈತ  ಅಪ್ರಾಪ್ತ ಬಾಲಕಿಗೆಒಂದು ವರ್ಷದಿಂದ ಸತತ ಲೈಂಗಿಕ ಕಿರುಕುಳ ನೀಡುತ್ತಿದ್ದನೆಂದು ಆರೋಪಿಸಲಾಗಿದೆ.

ಶಿಕ್ಷಕ ಕೃಷ್ಣಮೂರ್ತಿ ಖಾಲಿ ಕೊಠಡಿಯಲ್ಲಿ ಸ್ಪೇಷಲ್ ಕ್ಲಾಸ್ ಮಾಡುವುದಾಗಿ ಒಬ್ಬಬ್ಬರೆ ವಿಧ್ಯಾರ್ಥಿನಿಯರನ್ನ ಕರೆದು ಲೈಂಗಿಕ ಕಿರುಕುಳ ನೀಡುತ್ತಿದ್ದ. ವಿಷಯ ಬಾಯಿ ಬಿಟ್ರೆ ಕಡಿಮೆ ಅಂಕ ಕೊಟ್ಟು ಫೇಲ್ ಮಾಡೋದಾಗಿ ವಿದ್ಯಾರ್ಥಿನಿಯರಿಗೆ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ.

ಈ ನಡುವೆ ಶಿಕ್ಷಕ ಕೃಷ್ಣಮೂರ್ತಿ ಶಾಲೆಯ ಅಡುಗೆ ಸಿಬ್ಬಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಲೈಂಗಿಕ ಕಿರುಕುಳದ ಬಗ್ಗೆ ಬಾಲಕಿ ಮುಖ್ಯೋಪಾಧ್ಯಾಯರ ಬಳಿ ನೋವು ತೋಡಿಕೊಂಡಿದ್ದಾಳೆ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ.

ವಿಷಯ ಗ್ರಾಮಸ್ಥರಿಗೆ ತಿಳಿಯುವ ಮುಂಚೆಯೇ ಹೆಚ್ಚುವರಿ ರಜೆ ಪಡೆದು ಶಿಕ್ಷಕ ಕೃಷ್ಣಮೂರ್ತಿ ಎಸ್ಕೆಪ್  ಆಗಿದ್ದಾನೆ. ಇನ್ನು ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನ ವಿರುದ್ದ ಕ್ಷೇತ್ರ ಶಿಕ್ಷಣ ಅಧಿಕಾರಿ ಕ್ರಮ ಕೈಗೊಂಡಿಲ್ಲ.  ಸ್ಥಳಕ್ಕೆ ಬಿಇಓ,ಬರಬೇಕು ಕಾಮುಕ ಶಿಕ್ಷಕನನ್ನ ಅಮಾನತು ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಬೆಟ್ಟದಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

key words: mysore-Sexual harassment  – teacher – red hand – school -Protest -demanding -action.