ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಯುವಕ ಆತ್ಮಹತ್ಯೆಗೆ ಶರಣು….

kannada t-shirts

ಮೈಸೂರು,ಆ,24,2020(www.justkannada.in):  ಕೊರೋನಾ ಹಿನ್ನೆಲೆ ವ್ಯಾಪಾರ ವಹಿವಾಟು ಇಲ್ಲದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಒಂಟಿಕೊಪ್ಪಲ್ ನಲ್ಲಿ ಈ ಘಟನೆ ನಡೆದಿದ್ದು ದಿನೇಶ್(26) ಆತ್ಮಹತ್ಯೆಗೆ ಶರಣಾದ ಯುವಕ. ದಿನೇಶ್ ಜೆರಾಕ್ಸ್ ಅಂಗಡಿ ನಡೆಸುತ್ತಿದ್ದನು. ಹಲವು ಕಡೆ ಸಾಲ ಕೂಡ ಮಾಡಿದ್ದ ಎನ್ನಲಾಗಿದೆ. ಆದರೆ ಕೋವಿಡ್-19 ಹಿನ್ನೆಲೆಯಲ್ಲಿ ವ್ಯಾಪಾರ ವಹಿವಾಟು ಇಲ್ಲದೆ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ಎನ್ನಲಾಗಿದೆ.mysore-suicide-young-man-caught-financial-hardship

ಇನ್ನು ವಿವಿಪುರಂ ಠಾಣೆಯ ಇನ್ಸ್ ಪೆಕ್ಟರ್ ಅರುಣ್ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಕುರಿತು ವಿವಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: mysore-  suicide – young man -caught -financial hardship.

website developers in mysore