ಮೈಸೂರು ವಿವಿ ಪರೀಕ್ಷೆ ಅಕ್ರಮ ಆರೋಪ: 6 ಮಂದಿ ವಿರುದ್ಧ ಪ್ರಕರಣ ದಾಖಲು- ಪೊಲೀಸ್ ಆಯುಕ್ತ ಚಂದ್ರಗುಪ್ತ.

ಮೈಸೂರು,ಜೂನ್,10,2021(www.justkannada.in): ಮೈಸೂರು ವಿಶ್ವ ವಿದ್ಯಾನಿಲಯ ಪರೀಕ್ಷೆ ಅಕ್ರಮ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಸೋಮಸುಂದರ್ ಎಂಬುವವರಿಂದ ದೂರು ಬಂದಿತ್ತು. ಹೀಗಾಗಿ ನಿನ್ನೆ ರಾತ್ರಿ 6 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ ತಿಳಿಸಿದರು.jk

ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಮೈಸೂರು ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ, ಬಿಎಸ್ಸಿ ಕೆಮಿಸ್ಟ್ರಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಮಂಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ರು. ಈ ವೇಳೆ  ಸಾಕ್ಷ್ಯನಾಶಪಡಿಸಿ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆದಿತ್ತು ಎಂಬ ಆರೋಪ ಕೇಳಿಬಂದಿದೆ.

ಸೋಮಸುಂದರ್ ಎಂಬುವವರ ದೂರಿನನ್ವಯ ಪ್ರಕರಣ ದಾಖಲಿಸಿದ್ದೇವೆ. ಮಂಡಿ ಠಾಣೆ ಇನ್ಸ್ ಪೆಕ್ಟರ್ ನಾರಾಯಣ ಸ್ವಾಮಿಯನ್ನು ಅಮಾನತಿನಲ್ಲಿಟ್ಟು ತನಿಖೆ ಮಾಡುತ್ತೇವೆ. ಪ್ರತ್ಯೇಕ ಪೊಲೀಸ್ ಠಾಣೆಯ ಸಿಬ್ಬಂದಿಯಿಂದ ಈ ಕುರಿತು ತನಿಖೆ ನಡೆಸುತ್ತೇವೆ ಎಂದು ಪೊಲೀಸ್ ಆಯುಕ್ತ ಚಂದ್ರಗುಪ್ತ ಹೇಳಿದರು.

Key words: Mysore university-exam- illegal- allegations-Case – against- 6 persons-Police Commissioner -Chandragupta.