ಮನೆ ಮುಂದೆ ನಿಲ್ಲಿಸಿದ್ದ ವ್ಯಾನ್ ಗೆ ದುಷ್ಕರ್ಮಿಗಳಿಂದ ಬೆಂಕಿ….

ಮೈಸೂರು,ಮಾ,16,2020(www.justkannada.in):  ಮನೆ ಮುಂದೆ ನಿಲ್ಲಿಸಿದ್ದ ಮಾರುತಿ ವ್ಯಾನ್‌ಗೆ  ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ಹುಣಸೂರು ಪಟ್ಟಣದ ಮಾರುತಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ.  ಶೈನ್ ಪೂವಯ್ಯ ಅವರಿಗೆ ಸೇರಿದ ಮಾರುತಿ ವ್ಯಾನ್ ಗೆ ಬೆಂಕಿ ಹಚ್ಚಲಾಗಿದೆ. ಕಿಡಿಗೇಡಿಗಳು ಈ ಕೃತ್ಯವೆಸಗಿರುವ  ಶಂಕೆ ವ್ಯಕ್ತವಾಗಿದ್ದು, ಮಾರುತಿ ವ್ಯಾನ್ ಸುಟ್ಟು ಕರಕಲಾಗಿದೆ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಕುರಿತು ಹುಣಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Key words: mysore-van -fires – in front – house.