“ಉಸ್ತುವಾರಿ ಸಚಿವನಾಗುವ ಉದ್ದೇಶದಿಂದ ಮೈಸೂರಿಗೆ ಬರುತ್ತಿಲ್ಲ” : ಸಚಿವ ಸಿ.ಪಿ.ಯೋಗೇಶ್ವರ್

ಮೈಸೂರು,ಮಾರ್ಚ್,07,2021(www.justkannada.in) : ಮೈಸೂರಿನ ಹೆಸರಿನಲ್ಲಿ ಬ್ರಾಂಡ್ ಮಾಡಲು ಸರ್ಕಾರ ಮುಂದಾಗಿದೆ. ಈ‌ ನಿಟ್ಟಿನಲ್ಲಿ ಚರ್ಚೆಗಾಗಿ ಪದೇ, ಪದೇ ಮೈಸೂರಿಗೆ ಬರುತ್ತಿದ್ದೇನೆ. ಇದನ್ನ ಹೊರತುಪಡಿಸಿ ಇನ್ಯಾವ ರಾಜಕೀಯ ಉದ್ದೇಶ ಇಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದರು.

jkನಾನು ರಾಮನಗರ ಉಸ್ತುವಾರಿ ಕೊಡಿ ಎಂದು ಕೇಳಿದ್ದೇನೆ. ಆದರೆ, ಸಿಎಂ ಈ ಬಗ್ಗೆ ಇನ್ನು ಸ್ಪಷ್ಟಪಡಿಸಿಲ್ಲ. ಮೈಸೂರು ಉಸ್ತುವಾರಿ ಸಚಿವನಾಗುವ ಉದ್ದೇಶದಿಂದ ಮೈಸೂರಿಗೆ ಬರುತ್ತಿಲ್ಲ ಎಂದಿದ್ದಾರೆ.

Mysore,Becoming,minister,charge,purpose,Mysore,Not coming,Minister,C.P.Yogeshwar

ರಾಜ್ಯದ ಪ್ರವಾಸೋದ್ಯಮ ಬಹಳ ಹಿಂದೆ ಇದೆ. ಮೈಸೂರಿಗೆ ಬರುವ ಪ್ರವಾಸಿಗರಿಗೆ ಇಲ್ಲಿನ ವ್ಯವಸ್ಥೆ ಬಗ್ಗೆ ನಿರಾಸೆಯಾಗುತ್ತಿದೆ. ಇದನ್ನೆಲ್ಲ ನಿವಾರಿಸುವ ದೃಷ್ಟಿಯಿಂದ ವಿವಿಧ ಯೋಜನೆ ರೂಪಿಸಿದ್ದೇನೆ. ಆ‌ ಕೆಲಸದಿಂದ ಮೈಸೂರು ಬರುತ್ತಿದ್ದೇನೆ ಎಂದು ತಿಳಿಸಿದ್ದಾರೆ.

key words : Mysore-Becoming-minister-charge-purpose-Mysore-Not coming-Minister-C.P.Yogeshwar