ಅಗತ್ಯವಿದ್ದರೇ ನೈಟ್ ಕರ್ಫ್ಯೂ ಮುಂದುವರಿಕೆ: ಲಾಕ್ ಡೌನ್ ಬಗ್ಗೆ ಸಿಎಂ ಬಿಎಸ್ ವೈ ಹೇಳಿದ್ದೇನು ಗೊತ್ತೆ…?

ಬೆಂಗಳೂರು,ಏಪ್ರಿಲ್,14,2021(www.justkannada.in):  ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 8 ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ಈ ಸಂಬಂಧ ಅಗತ್ಯವಿದ್ದರೇ ನೈಟ್ ಕರ್ಫ್ಯೂ ಮುಂದುವರಿಸಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.CM,B.S.Y,Statement,atrocious,Extreme,Kodihalli Chandrasekhar

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಕೊರೊನಾ ನಿಯಂತ್ರಣಕ್ಕೆ ಈಗಾಗಲೇ ಹಲವು ಕ್ರಮ ಕೈಗೊಳ್ಳಲಾಗಿದೆ. 8 ಜಿಲ್ಲೆಗಳಲ್ಲಿ ಏಪ್ರಿಲ್ 20ರವರೆಗೆ ನೈಟ್ ಕರ್ಫ್ಯೂ ಕೂಡ ಜಾರಿಯಲ್ಲಿದೆ.  ತಜ್ಞರ ಜತೆ ಚರ್ಚಿಸಿ ಅಗತ್ಯವಿದ್ದರೇ  ನೈಟ್ ಕರ್ಫ್ಯೂ ವಿಸ್ತರಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದರು.Night curfew – necessary-lockdown-CM BS Yeddyurappa

ಲಾಕ್ ಡೌನ್ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಬಿಎಸ್ ಯಡಿಯೂರಪ್ಪ, ಲಾಕ್ ಡೌನ್ ಜಾರಿ, ವೀಕೆಂಡ್ ಲಾಕ್ ಡೌನ್ ಪ್ರಸ್ತಾಪವಿಲ್ಲ . ಲಾಕ್ ಡೌನ್ ಸಂಬಂಧ ಸರ್ವಪಕ್ಷಗಳ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಮಾಡಲಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದರು.

Key words: Night curfew – necessary-lockdown-CM BS Yeddyurappa