ನಿರ್ಭಯಾ ಗ್ಯಾಂಗ್ ರೇಪ್  ಕೊಲೆ ಪ್ರಕರಣ: ಗಲ್ಲುಶಿಕ್ಷೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ…

 

ನವದೆಹಲಿ,ಮಾ,2,2020(www.justkannada.in):  ನಿರ್ಭಯಾ ಗ್ಯಾಂಗ್ ರೇಪ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲ್ಲುಶಿಕ್ಷೆಗೆ ತಡೆಕೋರಿ ಅಪರಾಧಿಗಳು ಸಲ್ಲಿಸಿದ್ದ ಅರ್ಜಿಯನ್ನ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ವಜಾಗೊಳಿಸಿದೆ.

ಅಪರಾಧಿಗಳಾದ ಅಕ್ಷಯ್​ ಠಾಕೂರ್​(31), ಪವನ್​ ಗುಪ್ತಾ(25) ಹಾಗೂ ಮುಕೇಶ್​ ಸಿಂಗ್​(32) ಸಲ್ಲಿಸಿದ್ದ ಅರ್ಜಿಯನ್ನು ಪಟಿಯಾಲ ಹೌಸ್ ಕೋರ್ಟ್ ವಜಾಗೊಳಿಸಿದ್ದು ಈ ಮೂಲಕ ಗಲ್ಲು ಶಿಕ್ಷೆ ಫಿಕ್ಸ್ ಆಗಿದೆ. ಇನ್ನು ನಾಳೆ ಬೆಳಿಗ್ಗೆ ನಾಲ್ವರು ಅಪರಾಧಿಗಳಿಗೆ ಗಲ್ಲಿಗೇರಿಸುವ ಸಾಧ್ಯತೆ ಇದೆ.

ಈ ನಡುವೆ ಇಂದು ಆರೋಪಿ ಪವನ್ ಗುಪ್ತ ಸಲ್ಲಿಸಿದ್ದ ಕ್ಷಮಾಧಾನ ಕೋರಿದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇನ್ನು ಕೊನೆಯ ಪ್ರಯತ್ನವಾಗಿ ಅಪರಾಧಿ ಪವನ್ ಗುಪ್ತ ​ ರಾಷ್ಟ್ರಪತಿಗಳಿಗೆ ಕ್ಷಮಾಧಾನ ಅರ್ಜಿಯನ್ನು ಸಲ್ಲಿಸಿದ್ದು, ಇದು ಕೂಡ ತಿರಸ್ಕೃತಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

Key words: Nirbhaya- gang rape -murder –case- Petition – dismissed