ನಿರ್ಭಯಾ ಗ್ಯಾಂಗ್ ರೇಪ್ ಕೊಲೆ ಪ್ರಕರಣ: ಅಪರಾಧಿಯ ಕ್ಷಮಾದಾನ  ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ….

ನವದೆಹಲಿ,ಜ,17,2020(www.justkannada.in): ನಿರ್ಭಯಾ ಗ್ಯಾಂಗ್ ರೇಪ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಮಾಪಣೆ ಕೋರಿ ಅಪರಾಧಿ ಮುಖೇಶ್ ಸಲ್ಲಿಸಿದ್ದ ಕ್ಷಮಾಪಣ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ದಾರೆ.

2012 ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನಾಲ್ವರಿಗೆ  ಗಲ್ಲು ಶಿಕ್ಷೆಯಾಗಿದ್ದು ಇದರಲ್ಲಿ ಒಬ್ಬನಾದ ಮುಖೇಶ್ ಸಿಂಗ್ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದನು. ಈ  ಕ್ಷಮಾದಾನ ಅರ್ಜಿಯನ್ನ ರಾಷ್ಟ್ರಪತಿಗಳು ತಿರಸ್ಕರಿಸಿದ್ದಾರೆ.

ಅಪರಾಧಿ ಮುಖೇಶ್ ಕ್ಷಮಾದಾನ ಅರ್ಜಿಯನ್ನು  ನಿನ್ನೆ ಗೃಹ ಸಚಿವಾಲಯಕ್ಕೆ ಕಳುಹಿಸಲಾಗಿತ್ತು. ಆದರೆ ರಾಷ್ಟ್ರಪತಿ ರಮನಾಥ್ ಕೋವಿಂದ್ ಅವರು ಈ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದಾರೆ. ಈ ಮೂಲಕ ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಫಿಕ್ಸ್ ಆಗಿದೆ.

Key words: Nirbhaya -gang rape -murder case-President- rejected – criminals -petition