ಯಾರು ನಾಮಪತ್ರ ವಾಪಸ್ ಪಡೆದಿಲ್ಲ: 6 ನಾಮಪತ್ರಗಳು ಅಂಗೀಕಾರ-ಚುನಾವಣಾಧಿಕಾರಿ ಎಂ.ಕೆ ವಿಶಾಲಾಕ್ಷಿ.

ಬೆಂಗಳೂರು,ಜೂನ್,3,2022(www.justkannada.in):  ರಾಜ್ಯಸಭೆ ಚುನಾವಣೆ ಹಿನ್ನೆಲೆ ಇಂದು ನಾಮಪತ್ರ ವಾಪಸ್ ಪಡೆಯುವುದಕ್ಕೆ ಕಡೆಯ ದಿನವಾಗಿತ್ತು. ಈ ನಡುವೆ ಯಾರು ನಾಮಪತ್ರ ವಾಪಸ್ ಪಡೆದಿಲ್ಲ. 6 ನಾಮಪತ್ರಗಳು ಅಂಗೀಕಾರವಾಗಿವೆ ಎಂದು ಚುನಾವಣಾಧಿಕಾರಿ ಎಂ.ಕೆ ವಿಶಾಲಾಕ್ಷಿ ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಚುನಾವಣಾಧಿಕಾರಿ ಎಂ.ಕೆ ವಿಶಾಲಾಕ್ಷಿ, ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿತ್ತು. ಆದರೆ ಯಾರೂ ನಾಮಪತ್ರ ವಾಪಸ್ ಪಡೆದಿಲ್ಲ. ಜೂ 10 ರಂದು ಮತದಾನ ನಡೆಯಲಿದೆ. ಅಂದು 10ರಿಂದ 4 ಗಂಟೆವರೆಗೆ ಮತದಾನ ನಡೆಯಲಿದೆ.  ಬಳಿಕ ಸಂಜೆ 5ಕ್ಕೆ ಮತ ಎಣಿಕೆ ಪ್ರಾರಂಭವಾಗಿ ಫಲಿತಾಂಶ ಪ್ರಕಟವಾಗುತ್ತದೆ ಎಂದರು.covid-dead-body-cancels-license-order-state-government

ಜೂನ್ 10 ರಂದು ನಡೆಯುವ ರಾಜ್ಯದಿಂದ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆಗೆ ಬಿಜೆಪಿಯಿಂದ ಮೂವರು ಅಭ್ಯರ್ಥಿ ಕಾಂಗ್ರೆಸ್ ನಿಂದ ಇಬ್ಬರು ಜೆಡಿಎಸ್ ನಿಂದ ಓರ್ವ ಅಭ್ಯರ್ಥಿ ಕಣಕ್ಕಿಳಿದಿದ್ದಾರೆ.

Key words: not returned –nomination-Acceptance-Elector -MK Vishalakshi.