ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ‘’ವೈ ಶ್ರೇಣಿ ಭದ್ರತೆ’’ ಮಂಜೂರು…!

ಮಣಿಪಾಲ,ಜನವರಿ,01,2021(www.justkannada.in) : ಅಯೋಧ್ಯೆ ಶ್ರೀ ರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರಾಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ರಾಜ್ಯ ಸರಕಾರ ವೈ ಶ್ರೇಣಿ ಭದ್ರತೆ ಮಂಜೂರು ಮಾಡಿದೆ.jk-logo-justkannada-mysoreಈ ಸೌಲಭ್ಯವು ಗುರುವಾರದಿಂದಲೇ ಒದಗಿಸಲಾಗಿದೆ. ರಾಮಮಂದಿರ ನಿರ್ಮಾಣದ ಜನಜಾಗೃತಿ ಅಭಿಯಾನದಲ್ಲಿ ಸದ್ಯ ನಿರತಾಗಿರುವ ಶ್ರೀಗಳು ದೇಶಾದ್ಯಂತ ಸಂಚಾರ ಕೈಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಅವರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಉಡುಪಿ ಶಾಸಕ ಕೆ ರಘುಪತಿ ಭಟ್ ಸರಕಾರಕ್ಕೆ ಮನವಿ ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ.

 Pajavara shri vishwaprasannathirtha shripaada-Y Rank-Security-Granted ...!

ಇದಕ್ಕೆ ತ್ವರಿತವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕ ರಘುಪತಿ ಭಟ್ ಹಾಗೂ ರಾಜ್ಯ ಪೋಲೀಸ್ ಮಹಾನಿರ್ದೇಶಕರಿಗೆ ಪೇಜಾವರ ಮಠ ಕೃತಜ್ಞತೆ ಸಲ್ಲಿಸಿದ್ದಾರೆ.

key words : Pajavara shri vishwaprasannathirtha shripaada-Y Rank-Security-Granted …!