ಪರೇಶ್ ಮೆಸ್ತಾ ಹತ್ಯೆ ಪ್ರಕರಣದ ಬಗ್ಗೆ ಮರು ತನಿಖೆಯಾಗಬೇಕು- ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ.

ಶಿವಮೊಗ್ಗ, ಅಕ್ಟೋಬರ್,4,2022(www.justkannada.in): ಪರೇಶ್ ಮೆಸ್ತಾ ಹತ್ಯೆ ಪ್ರಕರಣದ ಬಗ್ಗೆ ಮರು ತನಿಖೆಯಾಗಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ.

ಈ ಕುರಿತು ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಪ್ರಕರಣದ ಬಗ್ಗೆ ಮರು ತನಿಖೆಯಾಗಬೇಕು ಸರ್ಕಾರ ಈ ನಿಟ್ಟಿನಲ್ಲಿ ಗಮನ ಹರಿಸಬೇಕು. ನಾನೂ ಕೂಡ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ ಎಂದರು.

ಪ್ರಕರಣದ ಬಗ್ಗೆ ಸರಿಯಾದ ತನಿಖೆಯಾಗಲಿ  ಎಂದು ವಾದ ಹುಟ್ಟುಕೊಂಡಿದೆ.  ಕುಟುಂಬಸ್ಥರು ಹಿಂದೂ ಯುವಕರು ಮರು ತನಿಖೆಗೆ ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮರು ತನಿಖೆಯಾಗಬೇಕು.  ಅದರ ನಂತರ ಯಾವುದೇ ವರದಿ ಬಂದರೂ ಒಪ್ಪಿಕೊಳ್ಳಬೇಕು ಎಂದು ಕೆ.ಎಸ್ ಈಶ್ವರಪ್ಪ ತಿಳಿಸಿದರು.

Key words: Paresh Mesta’s -murder -case -re-investigate- Former minister- KS Eshwarappa.