ಕೊರೊನಾ ಆತಂಕ ಮರೆತು ಪ್ರವಾಸಿತಾಣಗಳಲ್ಲಿ ಜನಸಾಗರ ! ಕೇಂದ್ರ ಗೃಹ ಸಚಿವಾಲಯ ತುರ್ತು ಸಭೆ

kannada t-shirts

ಬೆಂಗಳೂರು, ಜುಲೈ 11, 2021 (www.justkannada.in): ಪ್ರವಾಸಿ ತಾಣಗಳಿಗೆ ಭೇಟಿ ಕೊಡುವವರ ಸಂಖ್ಯೆ ಹೆಚ್ಚಿದೆ. ಸಾಗರದಂತೆ ಜನರು ಹರಿದುಬರುತ್ತಿದ್ದು, ಮತ್ತೆ ಆತಂಕ ಎದುರಾಗಿದೆ.

ಪ್ರವಾಸಿಗರು  ಕೊರೊನಾ ನಿಯಮಗಳನ್ನು ಉಲ್ಲಂಘಿಸಿ ಬೇಕಾಬಿಟ್ಟಿ ಓಡಾಡುತ್ತಿರುವುದು ಕಂಡುಬರುತ್ತಿದೆ.  ಇದರಿಂದ ಮತ್ತೆ ಕೊರೊನಾ ಸೋಂಕಿನ ತೀವ್ರತೆ ಹೆಚ್ಚುವ ಆತಂಕ ಎದುರಾಗಿದೆ.

ಈ ವಿಷಯ ಮನಗಂಡು ಕೇಂದ್ರ ಗೃಹ ಸಚಿವಾಲಯ ತುರ್ತು ಸಭೆ ನಡೆಸಿದೆ. ಕೇಂದ್ರ ಗೃಹ ಸಚಿವಾಲಯ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ, ರಾಜ್ಯ ಸರ್ಕಾರಗಳೊಂದಿಗೆ ಸಭೆ ನಡೆಸಿದ್ದಾರೆ.

ಪ್ರವಾಸಿ ತಾಣಗಳಲ್ಲಿ ಕೊರೊನಾ ಸೋಂಕು ತಡೆ ಸಂಬಂಧ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಿದ್ದಾರೆ.

website developers in mysore