ವಿಧಾನಸಭೆಯಲ್ಲಿ 10 ನೇ ಚಾಮರಾಜ ಒಡೆಯರ್, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರ ಅಳವಡಿಸಿ- ಸ್ಪೀಕರ್ ಗೆ ಸಚಿವ ಎಸ್ ಟಿ ಸೋಮಶೇಖರ್ ಪತ್ರ…

ಬೆಂಗಳೂರು,ಫೆಬ್ರವರಿ,3,2021(www.justkannada.in):  ಮೈಸೂರು ಜಿಲ್ಲೆಗೆ ಬಹಳಷ್ಟು ಕೊಡುಗೆ ನೀಡಿದ್ದಲ್ಲದೆ, ರಾಜಪರಂಪರೆಯ ಕಾಲದಲ್ಲಿಯೇ ಪ್ರಜಾಪ್ರಭುತ್ವದ ಪರಿಕಲ್ಪನೆ ಹೊಂದಿ ಅದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದ್ದ ಶ್ರೀ 10 ನೇ ಚಾಮರಾಜ ಒಡೆಯರ್, ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರವನ್ನು ವಿಧಾನಸಭೆಯಲ್ಲಿ ಅಳವಡಿಸಬೇಕು ಎಂದು ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡಿ ಕಾಗೇರಿ ಅವರಿಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ  ಎಸ್.ಟಿ.ಸೋಮಶೇಖರ್ ಪತ್ರ ಬರೆದು ಮನವಿ ಮಾಡಿದ್ದಾರೆ.jk

ವಿಧಾನ ಪರಿಷತ್ ನಲ್ಲಿ , ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರವನ್ನು ಅಳವಡಿಸಿರುವ ಕ್ರಮವನ್ನು ಸ್ವಾಗತಿಸಿರುವ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು, ರಾಜ್ಯದ ಹೆಸರನ್ನು ಉತ್ತುಂಗಗಕ್ಕೆ ತಂದ ಅನೇಕ ಮಹನೀಯರನ್ನು ನಾವು ಇಂದು ನೆನೆಯಬೇಕಿದೆ. ಅಲ್ಲದೆ, ರಾಜ್ಯಕ್ಕೆ ಉತ್ತಮ ಹೆಸರು ತಂದು ಕೊಡುವಲ್ಲಿ ಅಂದಿನ ಮೈಸೂರು ಮಹಾಸಂಸ್ಥಾನದ ಮಹಾರಾಜರುಗಳ ಕೊಡುಗೆಗಳೂ ಸಾಕಷ್ಟಿದೆ. ಶ್ರೀ 10 ನೇ ಚಾಮರಾಜ ಒಡೆಯರ್, ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆಯೂ ಅನನ್ಯ ಎಂದು ಹೇಳಿದ್ದಾರೆ.

ಪ್ರಜಾಪ್ರಭುತ್ವ ಪರಿಕಲ್ಪನೆಗೆ ಮೂಲ ಕಾರಣರಾದವರ ಭಾವಚಿತ್ರವನ್ನು ಪ್ರಜಾಪ್ರಭುತ್ವದ ಪವಿತ್ರ ದೇಗುಲವಾದ ವಿಧಾನಸಭೆಯಲ್ಲಿ  ಅಳವಡಿಸಬೇಕಿದೆ. ಭಾರತದಲ್ಲಿ ಪ್ರಜಾಪ್ರತಿನಿಧಿ ಸಭೆಯ ಪರಿಕಲ್ಪನೆಯನ್ನು ಹುಟ್ಟುಹಾಕಿದ್ದು,  10ನೇ ಚಾಮರಾಜ ಒಡೆಯರ್ ಅವರು. 1881ರಲ್ಲಿ ಈ ವ್ಯವಸ್ಥೆಯನ್ನು ಜಾರಿಗೆ ತಂದರು. ಆದರೆ, ಇದಕ್ಕೆ ಶಾಸನಬದ್ಧ ಮಾನ್ಯತೆ ನೀಡಿ ಇಂತಹ ಒಂದು  ಪರಿಕಲ್ಪನೆಯನ್ನು ಸಾಕಾರಗೊಳಿಸಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು. ಇಂತಹ ಒಂದು ಅದ್ಭುತ ಪರಿಕಲ್ಪನೆಯನ್ನು ಅವರು ಪೋಷಿಸಿದ್ದರಿಂದಲೇ ಸಮಾನತೆಯ ಜಾಗೃತಿ ಮೂಡಲು ಕಾರಣವಾಯಿತು. 1923ರಲ್ಲಿ ಹೊಸ ಪ್ರಜಾಪ್ರತಿನಿಧಿ ಸಭೆಯನ್ನು ಸ್ಥಾಪಿಸಿ  ಈ ಸಭೆಯನ್ನು ನಡೆಸಿ,  ಜಾತಿ, ವರ್ಗಗಳನ್ನು ನೋಡದೆ ಎಲ್ಲರಿಗೂ ಸಮಾನ ಅವಕಾಶವನ್ನು ಕಲ್ಪಿಸಿ ಆದರ್ಶ ಪ್ರಜಾಪ್ರಭುತ್ವದ ಮಾದರಿಯನ್ನು ಹಾಕಿಕೊಟ್ಟವರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು. ಅಲ್ಲದೆ, ಇವರು ಕೃಷ್ಣರಾಜ ಸಾಗರ ಅಣೆಕಟ್ಟು, ಹೊಸ ರೈಲು ಸಂಪರ್ಕಕ್ಕೆ ಮಾರ್ಗಗಳು, ಸಾಮಾಜಿಕ ಕಾನೂನುಗಳ ಜಾರಿ ಸೇರಿದಂತೆ ಅನೇಕ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಇಂಥ ಮಹನೀಯರನ್ನು ಗೌರವಿಸುವ ಮೂಲಕ ಆ ಭಾಗಕ್ಕೆ ಮನ್ನಣೆಯನ್ನು ಕೊಡಬೇಕಿದೆ ಎಂದು ಸಚಿವರು ಮನವಿ ಮಾಡಿದ್ದಾರೆ. photo- Chamaraja Wodeyar-Nalwadi Krishnaraja Wodeyar -legislative Assembly -Minister –ST Somashekhar-letter-speaker

ಹೀಗಾಗಿ ಇಂಥ ಮಹನೀಯರ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿ ಹಾಗೂ ಗೌರವ ಕೊಡುವ ಕೆಲಸ ನಮ್ಮಿಂದಾಗಬೇಕು. ಈ ನಿಟ್ಟಿನಲ್ಲಿ ಮಾನ್ಯ ವಿಧಾನಸಭಾ ಅಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸೂಕ್ತ ಕ್ರಮ ಕೈಗೊಂಡು ಶ್ರೀ 10ನೇ ಚಾಮರಾಜ ಒಡೆಯರ್ ಅವರ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಗಳನ್ನು ವಿಧಾನಸಭೆಯಲ್ಲೂ ಅಳವಡಿಸುವಂತೆ ಕ್ರಮ ವಹಿಸುವಂತೆ ಮೈಸೂರು ಜಿಲ್ಲೆಯ ನಾಗರಿಕರ ಪರವಾಗಿ ಮತ್ತು ಉಸ್ತುವಾರಿ ಸಚಿವರಾಗಿ ಎಸ್.ಟಿ.ಸೋಮಶೇಖರ್ ಅವರು ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.

ವಿಧಾನಸಭಾ ಅಧ್ಯಕ್ಷರಿಗೆ ಸಚಿವ ಎಸ್.ಟಿ ಸೋಮಶೇಖರ್  ಬರೆದಿರುವ  ಪತ್ರದ ಪೂರ್ಣ ವಿವರ ಇಲ್ಲಿದೆ..

ವೈವಿದ್ಯಮಯ ನಾಡು ಕರ್ನಾಟಕದಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿಗೆ ಅದರದ್ದೇ ಆದ ವಿಶೇಷತೆ, ಮಹತ್ವವಿದೆ. ಇಂದು ಮೈಸೂರು ಜಗತ್ತಿಗೆ ಮಾದರಿ, ವಿಶಿಷ್ಠವಾಗಿ ಬಿಂಬಿತವಾಗಿದೆ ಎಂದರೆ ಅದಕ್ಕೆ ಅನೇಕರ ಕೊಡುಗೆ ಇದೆ. ಮೈಸೂರು ಮಾದರಿ ನಗರಿಯಾಗಿ ರೂಪುಗೊಳ್ಳುವಲ್ಲಿ, ಇತಿಹಾಸದ ಪುಟಗಳಲ್ಲಿ ಮೈಸೂರು ವಿಜೃಂಬಿಸುವಲ್ಲಿ ಶ್ರೀ 10 ನೇ ಚಾಮರಾಜ ಒಡೆಯರ್ ಹಾಗೂ ಅವರ ಪುತ್ರ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಅಪಾರ. ಇಂತಹ ಮಹನೀಯರ ಭಾವಚಿತ್ರವನ್ನು ವಿಧಾನಸಭೆಯಲ್ಲಿ ಅಳವಡಿಸುವ ಮೂಲಕ ಗೌರವ ಸಮರ್ಪಿಸಬೇಕಿದೆ. ಪ್ರಜಾಪ್ರಭುತ್ವ ಪರಿಕಲ್ಪನೆಗೆ ಮೂಲ ಕಾರಣರಾದವರ ಭಾವಚಿತ್ರವನ್ನು ಪ್ರಜಾಪ್ರಭುತ್ವದ ಪವಿತ್ರ ದೇಗುಲವಾದ ವಿಧಾನಸಭೆಯಲ್ಲಿ  ಅಳವಡಿಸಬೇಕಿದೆ. ವಿಧಾನ ಪರಿಷತ್ ನಲ್ಲಿ ಮಹನೀಯರ ಸಾಲುಗಳಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರ  ಅಳವಡಿಸಿರುವುದು ಸ್ವಾಗತಾರ್ಹ ಹಾಗೂ ಅಭಿನಂದನಾರ್ಹ. ಇದಕ್ಕಾಗಿ ವಿಧಾನ ಪರಿಷತ್ ಸಭಾಪತಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ.

ಭಾರತದಲ್ಲಿ ಪ್ರಜಾಪ್ರತಿನಿಧಿ ಸಭೆಯ ಪರಿಕಲ್ಪನೆಯನ್ನು ಹುಟ್ಟುಹಾಕಿದ್ದು,  10ನೇ ಚಾಮರಾಜ ಒಡೆಯರ್ ಅವರು. 1881ರಲ್ಲಿ ಈ ವ್ಯವಸ್ಥೆಯನ್ನು ಜಾರಿಗೆ ತಂದರು. ಆದರೆ, ಇದಕ್ಕೆ ಶಾಸನಬದ್ಧ ಮಾನ್ಯತೆ ನೀಡಿ ಇಂತಹ ಒಂದು  ಪರಿಕಲ್ಪನೆಯನ್ನು ಸಾಕಾರಗೊಳಿಸಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು. ಇಂತಹ ಒಂದು ಅದ್ಭುತ ಪರಿಕಲ್ಪನೆಯನ್ನು ಅವರು ಪೋಷಿಸಿದ್ದರಿಂದಲೇ ಸಮಾನತೆಯ ಜಾಗೃತಿ ಮೂಡಲು ಕಾರಣವಾಯಿತು. 1923ರಲ್ಲಿ ಹೊಸ ಪ್ರಜಾಪ್ರತಿನಿಧಿ ಸಭೆಯನ್ನು ಸ್ಥಾಪಿಸಿ  ಈ ಸಭೆಯನ್ನು ನಡೆಸಿ,  ಜಾತಿ, ವರ್ಗಗಳನ್ನು ನೋಡದೆ ಎಲ್ಲರಿಗೂ ಸಮಾನ ಅವಕಾಶವನ್ನು ಕಲ್ಪಿಸಿ ಆದರ್ಶ ಪ್ರಜಾಪ್ರಭುತ್ವದ ಮಾದರಿಯನ್ನು ಹಾಕಿಕೊಟ್ಟವರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು. ಅಲ್ಲದೆ, ಇವರು ಕೃಷ್ಣರಾಜ ಸಾಗರ ಅಣೆಕಟ್ಟು, ಹೊಸ ರೈಲು ಸಂಪರ್ಕಕ್ಕೆ ಮಾರ್ಗಗಳು, ಸಾಮಾಜಿಕ ಕಾನೂನುಗಳ ಜಾರಿ ಸೇರಿದಂತೆ ಅನೇಕ ಕ್ರಮಗಳನ್ನು ತೆಗೆದುಕೊಂಡಿದ್ದಾರೆ.

ಇಂಥ ಮಹನೀಯರ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿ ಹಾಗೂ ಗೌರವ ಕೊಡುವ ಕೆಲಸ ನಮ್ಮಿಂದಾಗಬೇಕು. ಈ ನಿಟ್ಟಿನಲ್ಲಿ ಮಾನ್ಯ ವಿಧಾನಸಭಾ ಅಧ್ಯಕ್ಷರಾದ ತಾವುಗಳು ಕ್ರಮ ಕೈಗೊಂಡು ಶ್ರೀ 10ನೇ ಚಾಮರಾಜ ಒಡೆಯರ್ ಅವರ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಗಳನ್ನು ವಿಧಾನಸಭೆಯಲ್ಲೂ ಅಳವಡಿಸುವಂತೆ ಮೈಸೂರು ಜಿಲ್ಲೆಯ ನಾಗರಿಕರ ಪರವಾಗಿ ಮತ್ತು ಉಸ್ತುವಾರಿ ಸಚಿವನಾಗಿ ಈ ಮೂಲಕ ತಮ್ಮಲ್ಲಿ ಕೋರಿಕೊಳ್ಳುತ್ತಿದ್ದೇನೆ ಎಂದು ಎಸ್ .ಟಿ ಸೋಮಶೇಖರ್ ಮನವಿ ಮಾಡಿದ್ದಾರೆ.

Key words: photo- Chamaraja Wodeyar-Nalwadi Krishnaraja Wodeyar -legislative Assembly -Minister –ST Somashekhar-letter-speaker