ಸೆ.7 ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ….

ಮೈಸೂರು,ಆ,29,2019(www.justkannada.in): ಸೆಪ್ಟಂಬರ್ 7 ರಂದು ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಿಎಂ ಬಿ,ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ,  ಸೆಪ್ಟೆಂಬರ್ ೭ ರಂದು ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಪ್ರವಾಹ ಪರಿಸ್ಥಿತಿಯ ಕುರಿತು ‌ಮನವರಿಕೆ ಮಾಡುವ ಜತೆಗೆ ಹೆಚ್ಚಿನ ಪರಿಹಾರ ಕೋರಲಾಗುವುದು. ಕೇಂದ್ರ ಸರ್ಕಾರ ರಾಜ್ಯಕ್ಕೆ ಶೀಘ್ರ ಶುಭ ಸುದ್ದಿ ನೀಡಲಿದೆ ಎಂದು ತಿಳಿಸಿದರು.

ಮೂವರು ಡಿಸಿಎಂ ವಿಚಾರವಾಗಿ ಕೇಳಿದ ಪ್ರಶ್ನೆಗೆ ಕೋಪಗೊಂಡು ಸಿಎಂ ಬಿ.ಎಸ್ ಯಡಿಯೂರಪ್ಪ ನಿರ್ಗಮಿಸಿದರು.

Key words: PM Modi – visit –karnataka- September 7