ಪೊಲೀಸರು ಗ್ಯಾಂಗ್ ರೇಪ್ ಪ್ರಕರಣ  ಭೇದಿಸುವ ವಿಶ್ವಾಸವಿದೆ- ಸಿಎಂ ಬಸವರಾಜ ಬೊಮ್ಮಾಯಿ.

ಬೆಂಗಳೂರು,ಆಗಸ್ಟ್,28,2021(www.justkannada.in): ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣವನ್ನ ನಮ್ಮ ಪೊಲೀಸರು ಭೇದಿಸುವ ವಿಶ್ವಾಸವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಪ್ರಕರಣವನ್ನ ಪೊಲೀಸರು ಗಂಭೀರವಾಗಿ ತೆಗೆದುಕೊಂಡಿದ್ದು, 5 ತಂಡಗಳನ್ನ ರಚಿಸಿಕೊಂಡು ಕಾರ್ಯಾಚರಣೆಗಿಳಿದಿತ್ತು. ಶೀಘ್ರವೇ ಆರೋಪಿಗಳನ್ನ ಬಂಧಿಸಲಿದ್ದಾರೆ ಎಂದರು.

ಈ ಹಿಂದೆಯೂ ನಮ್ಮ ಪೊಲೀಸರು ಹಲವು ಪ್ರಕರಣಗಳನ್ನ ಭೇದಿಸಿದ್ದಾರೆ.  ನಮ್ಮ ಪೊಲೀಸರು ದಕ್ಷತೆಯಿಂದ  ಕೆಲಸ ಮಾಡುತ್ತಿದ್ದಾರೆ ಎಂದರು.

Key words: Police -confident -gang rape -case –CM -Basavaraja Bommai