ಮಡಿಕೇರಿಯಲ್ಲಿ  ಶೀಘ್ರವೇ ಎಮರ್ಜೆನ್ಸಿ ಹಾಸ್ಪಿಟಲ್ ತೆರೆಯುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಿದ ಸಂಸದ ಪ್ರತಾಪ್ ಸಿಂಹ…

ನವದೆಹಲಿ,ಜು,11,2019(www.justkannada.in): ಮಡಿಕೇರಿಯಲ್ಲಿ  ಶೀಘ್ರವೇ ಎಮರ್ಜೆನ್ಸಿ ಹಾಸ್ಪಿಟಲ್ ತೆರೆಯುವಂತೆ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದರು.

ಕಳೆದ ಲೋಕಸಭಾ ಚುನಾವಣೆಗೂ ಮುನ್ನ ಮಡಿಕೇರಿಯಲ್ಲಿ ಎಮರ್ಜೆನ್ಸಿ ಹಾಸ್ಪಿಟಲ್ ತೆರೆಯುವಂತೆ ಮತದಾರರು ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆ ಇಂದು ಸಚಿವರಾದ ಸದಾನಂದ ಗೌಡ  ಪಿಯುಷ್ ಘೋಯಲ್, ಶಾಸಕ  ಅಪ್ಪಚ್ಚುರಂಜನ್ ಹಾಗೂ ಸಂಸದ ತೇಜಸ್ವಿ ಸೂರ್ಯ , ಪ್ರತಾಪ್ ಸಿಂಹ ನಿಯೋಗ ಇಂದು  ಕೇಂದ್ರ ಆರೋಗ್ಯ ಖಾತೆ ಸಚಿವ  ಡಾ.ಹರ್ಷವರ್ಧನ್ ಅವರನ್ನು ಭೇಟಿ ಮಾಡಿ ಮಡಿಕೇರಿಯಲ್ಲಿ ಎಮರ್ಜೆನ್ಸಿ ಹಾಸ್ಪಿಟಲ್ ತೆರೆಯುವ ಸಂಬಂಧವಾಗಿ ಮನವಿ ಮಾಡಿದರು.

Key words: Pratap simha-appealed – Union Minister – open -emergency hospital – Madikeri