ಪಾಕ್ ಪರ ಘೋಷಣೆ : ಎಸ್ ಡಿಪಿಐ ಕಾರ್ಯಕರ್ತರ ವಿರುದ್ಧ ಮೈಸೂರಿನಲ್ಲಿ ದೂರು…

ಮೈಸೂರು,ಡಿಸೆಂಬರ್,31,2020(www.justkannada.in):  ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ‌ಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಡಿಪಿಐ ಕಾರ್ಯಕರ್ತರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮೈಸೂರಿನಲ್ಲಿ ರಾಷ್ಟ್ರೀಯ ಹಿಂದೂ ಸಮಿತಿಯು ನಗರದ ಅಶೋಕ್ ಪುರಂ ಪೊಲೀಸ್ ಠಾಣೆಗೆ ದೂರು ನೀಡಿದೆ.jk-logo-justkannada-mysore

ನಿನ್ನೆ ಗ್ರಾಮ ಪಂಚಾಯಿತಿ ಚುನಾವಣೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಎಸ್ ಡಿಪಿಐ ಕಾರ್ಯಕರ್ತರು ಸಂಭ್ರಮಾಚಾರಣೆಯಲ್ಲಿ ತೊಡಗಿದ್ದ ವೇಳೆ ಪಾಕಿಸ್ಥಾನ ಜಿಂದಾಬಾದ್ ಘೋಷಣೆ  ಕೂಗಾಲಾಗಿತ್ತು.  ಈ ಹಿನ್ನೆಲೆ  ಪ್ರಕರಣ ಸಂಬಂಧ ಮೈಸೂರಿನಲ್ಲಿ ರಾಷ್ಟ್ರೀಯ ಹಿಂದೂ ಸಮಿತಿಯ ರಾಷ್ಟ್ರಧ್ಯಕ್ಷ ವಿಕಾಸ್ ಶಾಸ್ತ್ರಿ ಅವರ ನೇತೃತ್ವದಲ್ಲಿ ಅಶೋಕಪುರಂ ಠಾಣೆಯಲ್ಲಿ SDPI ನ ಕಾರ್ಯಕರ್ತರ ವಿರುದ್ದ ದೂರು ದಾಖಲಿಸಲಾಯಿತು.pro-pak-slogan-dakshina-kannada-mysore-complaint-against-sdpi-activists

ಕನ್ನಡ ಜಿಲ್ಲೆಯ ಗ್ರಾಮ ಪಂಚಾಯಿತಿ ಚುನಾವಣ ಫಲಿತಾಂಶ ಸಂಭ್ರಮಾಚರಣೆಯಲ್ಲಿ ಪಾಕಿಸ್ತಾನ್ ಜ಼ಿಂದಾಬಾದ್ ಎಂದು ಕೂಗಿದ ಕಾರಣ ಭಾರತ ದೇಶದ ಅಖಂಡತೆಗೆ ತೇಜೊವಧೆ  ಮಾಡಲು ಮುಂದಾದ ಹಿನ್ನೆಲೆ ರಾಷ್ಟ್ರೀಯ ಹಿಂದೂ ಸಮಿತಿಯ ಸದಸ್ಯರು ದೂರು ದಾಖಲಿಸಿದ್ದಾರೆ.  ಈ ಸಂದರ್ಭದಲ್ಲಿ ಮೈಸೂರು ಪದಾಧಿಕಾರಿಗಳಾದ ಪ್ರದೀಪ್ ತೇಜಸ್ ಹಾಗು ಚೇತನ್ ಪಾಲ್ಗೋಂಡಿದ್ದರು.

Key words: Pro-Pak slogan-dakshina kannada-Mysore- complaint -against -SDPI activists …