ಬೆಂಗಳೂರಿನಲ್ಲಿ ಮಳೆ ಅವಾಂತರ; ಸರ್ಕಾರದ ವಿರುದ‍್ಧ ಡಿ.ಕೆ ಶಿವಕುಮಾರ್ ಕಿಡಿ.

ಬೆಂಗಳೂರು,ಸೆಪ್ಟಂಬರ್,5,2022(www.justkannada.in):  ನಿನ್ನೆ ಸುರಿದ ಧಾರಾಕಾರ ಮಳೆಗೆ ರಾಜ್ಯ ರಾಜಧಾನಿ ಬೆಂಗಳೂರಿನ ಜನತೆ ಸಾಕಷ್ಟು ಸಂಕಷ್ಟಕ್ಕೆ ಸಿಲುಕಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ಇಂದು ಮಾಧ್ಯಮಗಳ ಜತೆ ಮಾತನಾಡಿದ ಡಿ.ಕೆ ಶಿವಕುಮಾರ್, ಸರ್ಕಾರಕ್ಕೆ ಬೆಂಗಳೂರಿನ ಬೆಲೆ ಗೊತ್ತಲ್ಲ ಬೆಂಗಳೂರಿನ ಬ್ರ್ಯಾಡ್ ಹಾಳು ಆಡಿದ್ದಾರೆ.  ಬೆಂಗಳೂರಿನಲ್ಲಿ  ಕಳೆದ 3 ವರ್ಷದಿಂದಲೂ ಇದೇ ರೀತಿ ಅನಾಹುತವಾಗುತ್ತಿದೆ.  ಸರ್ಕಾರ ಏನಾದರೂ ವ್ಯವಸ್ಥೆ ಮಾಡಿದೆಯಾ…?ಎಂದು ಪ್ರಶ್ನಿಸಿದರು.

ಜನರು ನಿಮಗೆ ಅಧಿಕಾರ ಕೊಟ್ಟಿದ್ದಾರೆ. ಆದರೂ ಯಾಕೆ ಬದಲಾವಣೆ ಮಾಡಿಲ್ಲ. ರಾಜ್ಯದಲ್ಲಿ ರಾಜ್ಯ ಸರ್ಕಾರ ಸಂಫೂರ್ಣ ವಿಫಲವಾಗಿದೆ ಎಂದು ಡಿ.ಕ ಶಿವಕುಮಾರ್ ವಾಗ್ದಾಳಿ ನಡೆಸಿದರು.

Key words: Rain – Bangalore-DK Shivakumar – against – Govt