ಹೊಸ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಿದ ರಾಜ್ ಬಿ ಶೆಟ್ಟಿ

ಬೆಂಗಳೂರು, ಫೆಬ್ರವರಿ 15, 2019 (www.justkannada.in): ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ ಈಗ ತಮ್ಮದೇ ನಿರ್ದೇಶನದ ಹೊಸ ಸಿನಿಮಾ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದಾರೆ.

‘ಒಂದು ಮೊಟ್ಟೆಯ ಕಥೆ’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಗುರುತಿಸಿಕೊಂಡ ರಾಜ್ ಬಿ ಶೆಟ್ಟಿ ನಿರ್ದೇಶನದ ಈ ಚಿತ್ರದಲ್ಲಿ ಇಬ್ಬರು ನಾಯಕರು. ರಾಜ್ ಬಿ ಶೆಟ್ಟಿ ಮತ್ತು ರಿಷಬ್ ಶೆಟ್ಟಿ ನಾಯಕನಾಗಿರುವ ಚಿತ್ರಕ್ಕೆ ‘ಗರುಡ ಗಮನ ವೃಷಭ ವಾಹನ’ ಎಂದು ಟೈಟಲ್ ಇಡಲಾಗಿದೆ.

ಮಂಗಳೂರಿನ ಹಿನ್ನಲೆಯಲ್ಲಿ ನಡೆಯುವ ಗ್ಯಾಂಗ್ ಸ್ಟರ್ ಕಥೆ ಎಂದು ರಾಜ್ ಬಿ ಶೆಟ್ಟಿ ಹೇಳಿದ್ದಾರೆ. ತಮ್ಮ ಸ್ನೇಹಿತರ ಜತೆಗೂಡಿ ಈ ಸಿನಿಮಾ ಮಾಡುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆದರೆ ಜೂನ್ ನಲ್ಲಿ ಚಿತ್ರ ಬಿಡುಗಡೆಯಾಗಲಿದೆ.