ರಾಮನಗರ ನಗರಸಭೆ ಚುನಾವಣೆ; ಸಂಘಟಿತವಾಗಿ ಕೆಲಸ ಮಾಡುವಂತೆ ಕಾರ್ಯಕರ್ತರಿಗೆ ಡಿಸಿಎಂ ಅಶ್ವಥ್ ನಾರಯಣ್ ಕರೆ…

ಬೆಂಗಳೂರು,ಏಪ್ರಿಲ್,7,2021(www.justkannada.in):  ರಾಮನಗರ ನಗರಸಭೆ ಚುನಾವಣೆಯಲ್ಲಿ ಪಕ್ಷದ ಜಿಲ್ಲಾ ಮುಖಂಡರು, ಕಾರ್ಯಕರ್ತರು ಸಂಘಟಿತವಾಗಿ ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ್ ಅವರು ಹೇಳಿದರು.Illegally,Sand,carrying,Truck,Seized,arrest,driver

ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ಬುಧವಾರದಂದು ಬಿಜೆಪಿ ಜಿಲ್ಲಾ ಮುಖಂಡರ ಸಭೆ ನಡೆಸಿದ ಡಿಸಿಎಂ ಅಶ್ವಥ್ ನಾರಾಯಣ್ ಅವರು ಚುನಾವಣೆಯಲ್ಲಿ ಅನುಸರಿಸಬೇಕಾದ ಕಾರ್ಯತಂತ್ರ ಇತ್ಯಾದಿ ಅಂಶಗಳ ಬಗ್ಗೆ ಖಡಕ್‌ ಕ್ಲಾಸ್‌ ಕೊಟ್ಟರು.

ಈ ಬಾರಿ ರಾಮನಗರ ನಗರಸಭೆಯಲ್ಲಿ ಪಕ್ಷ ಅಧಿಕಾರ ಹಿಡಿಯಲೇಬೇಕು. ಅದಕ್ಕೆ ಪೂರಕವಾಗಿ ಎಲ್ಲರೂ ಒಟ್ಟಿಗೆ ಕೆಲಸ ಮಾಡಬೇಕು. ಇದೇ 27 ರಂದು ಚುನಾವಣೆ ನಡೆಯಲಿದ್ದು,  ಪ್ರತಿಯೊಬ್ಬರು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.

ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದ ಮೇಲೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಕಾಂಗ್ರೆಸ್‌, ಜೆಡಿಎಸ್‌ ಸರಕಾರಗಳ ಕಾಲದಲ್ಲಿ ಆಗಿದ್ದಂತೆ ಅಭಿವೃದ್ಧಿ ಕೆಲಸಗಳು ಕೇವಲ ಕಾಗದದ ಮೇಲೆ ಮಾತ್ರ ಇಲ್ಲ. ನೈಜವಾಗಿ ಕಾರ್ಯಗತವಾಗಿ ಜನರಿಗೆ ಕಾಣುತ್ತಿವೆ. ಈ ಅಂಶಗಳನ್ನು ಜನತೆಗೆ ಮನವರಿಕೆ ಮಾಡಿಕೊಟ್ಟು ಮತ ಕೇಳಬೇಕು ಎಂದು ಮುಖಂಡರಿಗೆ ಡಿಸಿಎಂ ಅಶ್ವಥ್ ನಾರಾಯಣ್ ಸೂಚಿಸಿದರು. Ramanagar –Municipal- Election-DCM- Ashwath Narayan - activists - work - organized manner.

ರಾಮನಗರವೂ ಸೇರಿದಂತೆ ಇಡೀ ಜಿಲ್ಲೆಗೆ ನದಿ ಮೂಲಗಳಿಂದ ಕುಡಿಯುವ ನೀರು ಸರಬರಾಜು ಮಾಡುವುದಿರಬಹುದು, ರಾಮನಗರದ ಅಭವೃದ್ಧಿಗೆ ರೂಪಿಸಿರುವ ವಿವಿಧ ಯೋಜನೆಗಳು ಸೇರಿದಂತೆ ಎಲ್ಲ ಅಂಶಗಳನ್ನು ಜನರಿಗೆ ತಿಳಿಸಬೇಕು ಎಂದು ಅವರು ಹೇಳಿದರು.

ಈ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷ ಹುಲವಾಡಿ ದೇವರಾಜ, ಸಂಘಟನಾ ಕಾರ್ಯದರ್ಶಿ ಕಾಂತರಾಜ್ ಮತ್ತಿತರರು ಹಾಜರಿದ್ದರು.

Key words: Ramanagar –Municipal- Election-DCM- Ashwath Narayan – activists – work – organized manner.