ರಮೇಶ್ ಜಾರಕಿಹೊಳಿ ಸಮಾಜಕ್ಕೆ ಅಂಜುವ ವ್ಯಕ್ತಿ : ಸಿಡಿ ವಿಚಾರ ರಾಜಕೀಯ ಪಿತೂರಿ ಎಂದ ಸಚಿವ ಸಿ.ಪಿ ಯೋಗೇಶ್ವರ್….

ಮೈಸೂರು,ಮಾರ್ಚ್,3,2021(www.justkannada.in): ರಾಜ್ಯದಲ್ಲಿ ಬಾರಿ ಸದ್ದು ಮಾಡುತ್ತಿರುವ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ರಿಲೀಸ್ ವಿಚಾರ ಸಂಬಂಧ, ಇದೊಂದು ರಾಜಕೀಯ ಪಿತೂರಿ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ತಿಳಿಸಿದ್ದಾರೆ.jk

ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ಸಚಿವ ಸಿ.ಪಿ ಯೋಗೇಶ್ವರ್, ರಮೇಶ್ ಜಾರಕಿಹೊಳಿ ದೈವ ಭಕ್ತ. ಸಮಾಜಕ್ಕೆ ಅಂಜುವ ವ್ಯಕ್ತಿ. ಈ ರೀತಿಯ ತಪ್ಪು ಮಾಡಿರುತ್ತಾರೆ ಅಂತ ಅನ್ನಿಸುತ್ತಿಲ್ಲ. ಮೇಲ್ನೋಟಕ್ಕೆ ಇದೊಂದು ರಾಜಕೀಯ ಪಿತೂರಿ ಅನ್ನಿಸುತ್ತಿದೆ ಎಂದರು.

ramesh-jarackiholi-cd-release-minister-cp-yogeshwar-political-conspiracy
ಕೃಪೆ-internet

ನಿನ್ನೆಯಿಂದಲೂ ನಾನು ಮೈಸೂರಿನಲ್ಲೇ ಇದ್ದೇನೆ. ಏನಾಗಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಸತ್ಯಾಸತ್ಯತೆ ಪರಿಶೀಲನೆ ಆಗುವವರೆಗೂ ನೋಡೋಣ. ಈ ವಿಚಾರದಲ್ಲಿ ನಾನು ರಮೇಶ್ ಜಾರಕಿಹೊಳಿ ಅವರ ಬೆಂಬಲಕ್ಕೆ ಇದ್ದೇ‌ನೆ. ಈಗಾಗಲೇ ಅವರ ಜೊತೆ ಮಾತನಾಡಿದ್ದೇನೆ, ಅವರು ನಾನು ತಪ್ಪು ಮಾಡಿಲ್ಲ ಎಂದಿದ್ದಾರೆ ಎಂದು ಸಚಿವ ಸಿ.ಪಿ ಯೋಗೇಶ್ವರ್ ತಿಳಿಸಿದರು.

Key words: Ramesh Jarackiholi-CD- release-Minister -CP Yogeshwar – political conspiracy.