ಸಂಪುಟಕ್ಕೆ ಶಾಸಕರ ಸೇರ್ಪಡೆ, ಸಿಎಂ ನಿರ್ಧಾರಕ್ಕೆ ಬದ್ಧ : ಸಚಿವ ರಮೇಶ್ ಜಾರಕಿಹೊಳಿ

ಬೆಂಗಳೂರು,ಅಕ್ಟೊಂಬರ್,04,2020(www.justkannada.in) : ಸಂಪುಟಕ್ಕೆ ಶಾಸಕರ ಸೇರ್ಪಡೆ ಕುರಿತು ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧ  ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.jk-logo-justkannada-logoಹೊಸ ಮುಖಗಳಿಗೆ ದಾರಿ ಮಾಡಿಕೊಡುವ ಉದ್ದೇಶದಿಂದ ಸಂಪುಟದ ಕೆಲವು ಮಂತ್ರಿಗಳನ್ನು, ವಿಶೇಷವಾಗಿ ಬೆಳಗಾವಿ ಜಿಲ್ಲೆಯ ಸಚಿವರನ್ನು ಕೈಬಿಡಬಹುದು ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಈ ರೀತಿ ಪ್ರತಿಕ್ರಿಯಿಸಿದ್ದಾರೆ.Ramesh Jaraki Hioli-MLA's-Admission-Cabinetಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ಪಕ್ಷದ ನಾಯಕತ್ವ ಯಾವುದೇ ನಿರ್ಧಾರ ಕೈಗೊಂಡರೂ ಅದಕ್ಕೆ ಬದ್ಧರಾಗಿದ್ದು, ಬೆಳಗಾವಿ ಜಿಲ್ಲೆಯ ಯಾವುದೇ ಸಚಿವರ ಕೈಬಿಟ್ಟರೂ ಯಾವುದೇ ಆಕ್ಷೇಪವಿಲ್ಲ. ಪಕ್ಷದಲ್ಲಿ ಸಂಭವಿಸಲಿರುವ ಬಿರುಕುಗಳನ್ನು ತಪ್ಪಿಸಲು ಪಕ್ಷದ ನಾಯಕತ್ವವು ಈ ಬಾರಿ ಕೆಲ ನಾಯಕರಿಗೆ ಅವಕಾಶ ಕಲ್ಪಿಸಲು ಪಕ್ಷದ ನಾಯಕತ್ವ ನಿರ್ಧಾರ ಕೈಗೊಳ್ಳಲಿದೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.

key words : Ramesh Jaraki Hioli-MLA’s-Admission-Cabinet