ರಾಜಕಾರಣಿಗಳ ಸಿಡಿ ಇದೆ ಅನ್ನೋರನ್ನ ಒದ್ದು ಏರೋಪ್ಲೇನ್ ಹತ್ತಿಸಿ- ಹೆಚ್.ಡಿ ಕುಮಾರಸ್ವಾಮಿ ಕಿಡಿ…

kannada t-shirts

ಮೈಸೂರು,ಮಾರ್ಚ್,5,2021(www.justkannada.in): ರಾಜಕಾರಣಿಗಳ ಸಿಡಿ ಇದೆ ಎನ್ನುವವರು ಮೊದಲು ಅಂತವರನ್ನ ಒದ್ದು ಎರೋಪ್ಲೇನ್ ಹತ್ತಿಸಿ. ಅವರನ್ನ ಬಂಧಿಸಿ ಅವರ ಬಳಿ ಇರುವ ಸಿಡಿಗಳನ್ನ ಸರ್ಕಾರವೇ ಜನರ ಮುಂದೆ ಬಿಡುಗಡೆ ಮಾಡಲಿ ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.jk

ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಂದು ಮಾತನಾಡಿದ ಮಾಜಿ ಕುಮಾರಸ್ವಾಮಿ ಸಿಡಿ ಇದೆ ಎಂದು ಕೆಲವರು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಇದು ಬ್ಲ್ಯಾಕ್‌ಮೇಲ್‌ನ ಕಾರ್ಯತಂತ್ರ. ಇದಕ್ಕೆ ಪುಷ್ಠಿ ಕೊಟ್ಟು ಬೆಳಸಬೇಡಿ ಎಂದು ಆಗ್ರಹಿಸಿದರು.

ಯಾರು ಆ ಮಾಜಿ ಸಿಎಂ ಎಂದು ಬಾಯಿ ಬಿಡಿಸಿ…

ಅದ್ಯಾರೋ ಒಬ್ಬ ಮಾಜಿ ಸಿಎಂ ಅದೆಲ್ಲೋ ಹೋಗಿ ಬರುತ್ತಾರೆ. ಅದರ ಸಿಡಿ ನನ್ನ ಬಳಿ ಇದೆ ಅಂತಾನೆ. ರಾಜ್ಯದಲ್ಲಿ ದೇವೇಗೌಡ, ಎಸ್‌ಎಂ ಕೃಷ್ಣ ಹಾದಿಯಾಗಿ ತುಂಬಾ ಜನ ಇದ್ದಾರೆ. ಯಾರು ಆ ಮಾಜಿ ಸಿಎಂ ಎಂದು ಬಾಯಿ ಬಿಡಿಸಿ. ಸುಮ್ಮನ್ನೇ ನಾವು ಹೊರಗೆ ಓಡಾಡುವಾಗ ಮುಜುಗರ ತರಬೇಡಿ. ಜನ ನಮ್ಮನ್ಮು ಅನುಮಾನದಿಂದ ನೋಡುವ ಹಾಗೇ ಮಾಡಬೇಡಿ ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದರು.

ಹಿಂದೆ ಅದ್ಯಾವುದೋ ಆ್ಯಂಕರ್ ವಿಚಾರದಲ್ಲು ನನ್ನ ಹೆಸರು ತಂದರು. ಆಗಲು ಸರಿಯಾಗಿ ಜಾಡಿಸಿದ್ದೇ‌ನೆ. ನನಗೆ ಈ ವಿಚಾರದಲ್ಲಿ ಯಾವುದೇ ಭಯವು ಇಲ್ಲ. ಈ ಪ್ರಕರಣದಲ್ಲಿ ನಾನು ತುಂಬಾ ಕ್ಲೀನ್ ಆಗಿದ್ದೇನೆ. ಆದರೆ ನನ್ನ ಉದ್ದೇಶ ಇಂತಹ ಬ್ಲ್ಯಾಕ್ ಮೇಲ್‌ಗಳು ನಿಲ್ಲಬೇಕು. ಇಂತಹ ಪ್ರಕರಣಗಳು ಹೇಸಿಗೆ ಬರುವಂತ ಸ್ಥಿತಿ ನಿರ್ಮಾಣ ಮಾಡಿದೆ ಎಂದು ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಮಂತ್ರಿನಾ ರಾಜೀನಾಮೆ ಕೊಡಿಸಬೇಕೆಂಬ ಉದ್ದೇಶ ಇತ್ತು. ಈಗ ಸಫಲರಾಗಿದ್ದಾರೆ..

ಪ್ರಕರಣ ಕುರಿತು ಇದೀಗಾ ಹಲವು ರೀತಿಯ ವ್ಯಾಖ್ಯಾನ ಶುರುವಾಗಿದೆ. ಪ್ರಕರಣ ಹಳ್ಳ ಹಿಡಿಯುವಂತದ್ದು ಏನು.? ಆ ಮಂತ್ರಿನಾ ರಾಜೀನಾಮೆ ಕೊಡಿಸಬೇಕೆಂಬ ಉದ್ದೇಶ ಇತ್ತು. ಇದೀಗ ಆ ರಾಜೀನಾಮೆ ಕೊಡಿಸುವಲ್ಲಿ ಅವರು ಸಫಲರಾಗಿದ್ದಾರೆ. ಇದೀಗ ಆ ಹೆಣ್ಣು ಮಗಳನ್ನ ಕಟ್ಟಿಕೊಂಡು ಅವರಿಗೆ ಏನು.? ಅವರಿಬ್ಬರೇ ವಿಡಿಯೋ ಮಾಡಿಕೊಂಡಿದ್ದಾರೆ. ಆದರೆ ಆ ವಿಡಿಯೋ ಹೊರಗೆ ಕೊಟ್ಟವರು ಯಾರು, ಗೊತ್ತಿಲ್ಲ.? ಇಂತಹ ವಿಚಾರದಲ್ಲಿ ಸುಮ್ಮನ್ನೇ ಕಲ್ಲು ಹೊಡೆಯಬಾರದು ಎಂದರು.ramesh jarakiholi rasaleele –cd –case-mysore- Former cm- hd kumaraswamy

ಇವತ್ತು ರಾಜಕೀಯ ತುಂಬಾ ಕಲುಷಿತವಾಗಿದೆ. ಕೆಸರು ನಮ್ಮ‌ ಮೇಲೆ ನಾವೇ ಎರಚಿಕೊಂಡ ಹಾಗೆ. ಇಂತಹ ಪ್ರಕರಣದಿಂದ ನಮ್ಮ‌ನ್ನು ಜನ ತಪ್ಪಾಗಿ ತಿಳಿದು ಕೊಳ್ಳುತ್ತಾರೆ. ಮೊದಲು ಇಂತವರನ್ನ ಒದ್ದು ಒಳಗೆ ಹಾಕಿ ಎಂದು ಆಗ್ರಹಿಸಿದರು.

Key words: ramesh jarakiholi rasaleele –cd –case-mysore- Former cm- hd kumaraswamy

website developers in mysore