ರಮೇಶ್ ಜಾರಕಿಹೊಳಿ ಹೇಳಿಕೆ  ವಿಚಾರ: ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಲಿ ಎಂದ ಸಿದ್ಧರಾಮಯ್ಯ…

ಬೆಂಗಳೂರು,ಜನವರಿ,16,2021(www.justkannada.in): 9 ಕೋಟಿ ರೂ ಖರ್ಚು ಮಾಡಿ ಸರ್ಕಾರ ಕೆಡವಿದ್ರು. ಅದರಿಂದಾಗಿ ಸಿ.ಪಿ ಯೋಗೇಶ್ವರ್ ಮಂತ್ರಿಯಾಗಿದ್ದಾರೆ ಎಂದು ಸಚಿವ ರಮೇಶ್ ಜಾರಕಿಹೊಳಿ ಅವರೇ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಲಿ ಎಂದು ವಿಧಾನಸಭೆ ವಿಪಕ್ಷನಾಯಕ ಸಿದ್ಧರಾಮಯ್ಯ ಆಗ್ರಹಿಸಿದರು.jk-logo-justkannada-mysore

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ,  ಸಿಎಂ ಬಿಎಸ್ ಯಡಿಯೂರಪ್ಪ ಅಪರೇಷನ್ ಕಮಲದ ಜನಕ. ಅಪರೇಷನ್ ಕಮಲದ ನಿರ್ಮಾತೃ. ಜನರ ಆಶೀರ್ವಾದದಿಂದ ಅವರು ಮುಖ್ಯಮಂತ್ರಿಯಾಗಿಲ್ಲ. ನಮ್ಮ ಶಾಸಕರನ್ನ ಖರೀದಿ ಮಾಡಿ ಸಿಎಂ ಆಗಿದ್ದಾರೆ ಎಂದು ಟೀಕಿಸಿದರು.

Ramesh jarakiholi-statement-former cm- Siddaramaiah
siddaramaih#profile..

ಹಾಗೆಯೇ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಹಿರಿಯ ನಾಯಕ. ಸಿಡಿ ಇದೆ ಎಂದು ಅವರು ಬಾಯಿ ಬಿಟ್ಟು ಹೇಳಿದ್ದಾರೆ.  ಬಿಎಸ್ ವೈ ಕೊಳಕು ಸಿಡಿ ಇದೆ ಎಂದು ಹೇಳಿದ್ದಾರೆ ಎಂದು ಸಿದ್ಧರಾಮಯ್ಯ ಲೇವಡಿ ಮಾಡಿದರು.

Key words: Ramesh jarakiholi-statement-former cm- Siddaramaiah