ನನ್ನ ಹೆಸರು ಹೇಳಿದ್ರೆ ಅವರಿಗೆ ಮಾರ್ಕೆಟಿಂಗ್ ಆಗುತ್ತೆ- ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್…

ಬೆಂಗಳೂರು,ಏಪ್ರಿಲ್,1,2021(www.justkannada.in):  ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ತಮ್ಮ ವಿರುದ್ಧ ಆರೋಪ ಮಾಡಿರುವ ಹಿನ್ನೆಲೆ ಈ ಕುರಿತು ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ನನ್ನ ಹೆಸರು ಹೇಳಿದ್ರೆ ಅವರಿಗೆ ಮಾರ್ಕೆಟಿಂಗ್ ಆಗುತ್ತೆ. ಹೀಗಾಗಿ ನನ್ನ ಹೆಸರು ಬಳಸಿಕೊಂಡಿದ್ದಾರೆ.  ನನಗೂ ಸಿಡಿ ಕೇಸ್ ಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ  ನೀಡಿದ್ದಾರೆ.Illegally,Sand,carrying,Truck,Seized,arrest,driver

ಈ ಕುರಿತು ಇಂದು ಮಾಧ್ಯಮಗಳಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, , ಸಿಡಿ ವಿಚಾರ ಅಸಂಬದ್ಧ. ಅದು ನನಗೆ ಸಂಬಂಧ ಪಡದಿರುವ ವಿಚಾರ. ನನ್ನ ಹೆಸರು ಹೇಳಿದರೆ ಅವರಿಗೆ ಮಾರ್ಕೆಟಿಂಗ್ ಆಗುತ್ತೆ. ಅದಕ್ಕೆ ನನ್ನ ಹೆಸರು ಸೇರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ  ಎಂದರು.Ramesh jarkiholi –CD case- marketing -my name-KPCC President- DK Shivakumar.

ರಾಜ್ಯದ ಇತಿಹಾಸದಲ್ಲಿ ಇದು ಮೊದಲ ಸಲ ಕ್ಯಾಬಿನೆಟ್ ಸಚಿವರು ಸಿಎಂ ಬಿಎಸ್ ವೈ ವಿರುದ್ಧ ಆರೋಪಿಸಿದ್ದಾರೆ. ತಿಪ್ಪೆ ಸಾರಿಸೋದು ಏನಿಲ್ಲಾ, ಸಿಎಂ ರಿಸೈನ್ ಮಾಡಬೇಕು. ಇಲ್ಲ ಆ ಸಚಿವರ ರಾಜೀನಾಮೆ ಪಡೆಯಬೇಕು. ಒಳಗೆ ಏನೇನು ಇದೆಯೋ, ಸಿಎಂ ರಾಜೀನಾಮೆ ಕೊಡಲಿ. ಇಲ್ಲಾ ಈಶ್ವರಪ್ಪನವರನ್ನ ತೆಗೆದು ಹಾಕಲಿ. ಕಾಂಗ್ರೆಸ್ ಇದರ ವಿರುದ್ದ ಹೋರಾಟ ಮಾಡುತ್ತೆ ಎಂದು ಹೇಳಿದರು.

Key words: Ramesh jarkiholi –CD case- marketing -my name-KPCC President- DK Shivakumar.