ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಸಿದ್ಧರಾಮಯ್ಯ ವಿರುದ್ದ ಸ್ಪರ್ಧೆಗೆ ಸಿದ್ದ- ಮತ್ತೆ ಸವಾಲೆಸೆದ ಸಚಿವ ಶ್ರೀರಾಮುಲು…

ಬೆಂಗಳೂರು,ನ,19,2019(www.justkannada.in): ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ನನ್ನ ವಿರುದ್ದ ಸ್ಪರ್ಧೆಗೆ ಬನ್ನಿ ಎಂದು ಪಂಥಹ್ವಾನ ನೀಡಿದ್ದ ಆರೋಗ್ಯ ಸಚಿವ ಶ್ರೀರಾಮುಲು ಇದೀಗ ಮತ್ತೆ ಸಿದ್ಧರಾಮಯ್ಯಗೆ ಸವಾಲು ಹಾಕಿದ್ದಾರೆ.

ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಸಿದ್ಧರಾಮಯ್ಯ ವಿರುದ್ದ ಸ್ಪರ್ಧೆಗೆ ಸಿದ್ದನಿದ್ದೇನೆ. ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ನನ್ನ ವಿರುದ್ದ  ಸ್ಪರ್ಧಿಸಲಿ ಎಂದು ಸಚಿವ ಶ್ರೀರಾಮುಲು  ಸವಾಲು ಹಾಕಿದ್ದಾರೆ.

ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಶ್ರೀರಾಮುಲು,  ನಿಮಗೆ ತಾಕತ್ತಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆ ಎದುರಿಸಿ. ಮೀಸಲು ಕ್ಷೇತ್ರ ಹೊರತುಪಡಿಸಿ ಬೇರೆ ಯಾವುದೇ ಕ್ಷೇತ್ರದಲ್ಲಾದರೂ ಸರಿ ಸ್ಪರ್ಧಿಸಲು ಸಿದ್ಧ. ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಚುನಾವಣೆಗೆ ನಿಲ್ಲುತ್ತೇನೆ. ಇಬ್ಬರೂ ಮತ್ತೆ ಚುನಾವಣೆ ಎದುರಿಸೋಣ. ಯಾರು ಗೆಲ್ಲುತ್ತಾರೆ ನೋಡಿಯೇ ಬಿಡೋಣ ಎಂದು ಸಿದ್ಧರಾಮಯ್ಯಗೆ ಸವಾಲು ಹಾಕಿದರು.

ಹಾಗೆಯೇ ಸಿದ್ಧರಾಮಯ್ಯ ಸಿಎಂ ಆಗಬೇಕೆಂದು ಕನಸ್ಸು ಕಾಣಿತ್ತಿದ್ದಾರೆ. ಆದರೆ ಅದು ನನಸ್ಸಾಗಲ್ಲ ಎಂದು ಶ್ರೀರಾಮುಲು ಭವಿಷ್ಯ ನುಡಿದರು. ಅವರು ಶ್ರೀರಾಮುಲುಗೆ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ನೀಡಬೇಕಿತ್ತು. ಡಿಸಿಎಂ ಮಾಡುತ್ತೇವೆ ಎಂದು ಬಿಜೆಪಿಯವರು ಪ್ರಚಾರ ಮಾಡಿ ಡಿಸಿಎಂ ಸ್ಥಾನ ಕೊಡಲಿಲ್ಲ. ಶಾಸಕರಲ್ಲದವರಿಗೆ ಡಿಸಿಎಂ ಪಟ್ಟ ಕೊಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದರು.

Key words: Ready -contest -against -Siddaramaiah – any constituency –Minister- Sriramulu – challenged