ಮುಂಬೈನಲ್ಲಿ ಅತೃಪ್ತ ಶಾಸಕರ ವಾಸ್ತವ್ಯಕ್ಕೆ ಸಿಟ್ಟು: ರೆನೈಸೆನ್ಸ್ ಹೋಟೆಲ್ ಮುಂಭಾಗ ‘ಕೈ’ ಕಾರ್ಯಕರ್ತರಿಂದ ಪ್ರತಿಭಟನೆ…

ಮುಂಬೈ,ಜು,23,2019(www.justkannada.in):  ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನ ರೆನೈಸೆನ್ಸ್ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿರುವ  ರಾಜ್ಯ ಅತೃಪ್ತ ಶಾಸಕರ ನಡೆಯನ್ನ ಖಂಡಿಸಿ ಮಹಾರಾಷ್ಟ್ರ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಅತೃಪ್ತ ಶಾಸಕರು ತಂಗಿರುವ ಮುಂಬೈನ ರೆನೈಸೆನ್ಸ್ ಹೋಟೆಲ್ ಮುಂಭಾಗಕ್ಕೆ ಜಮಾಯಿಸಿದ ಮಹಾರಾಷ್ಟ್ರ ಯುವಕಾಂಗ್ರೆಸ್ ಘಟಕದ ಸದಸ್ಯರು ಕಪ್ಪುಪಟ್ಟಿ ಧರಿಸಿ   ಬಿಜೆಪಿ ವಿರುದ್ದ  ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಶಾಸಕರನ್ನ ಸೆಳೆದು ಸಮ್ಮಿಶ್ರ ಸರ್ಕಾರವನ್ನ ಅಸ್ಥಿರಗೊಳಿಸಲು ಯತ್ನಿಸಿದ್ದಾರೆ. ಇದನ್ನ ನಾವು ಖಂಡಿಸುತ್ತೇವೆ ಎಂದು ಕಿಡಿಕಾರಿದರು.

ಪ್ರತಿಭಟನೆ ಜೋರಾಗುತ್ತಿದ್ದಂತೆ ಸ್ಥಳದಲ್ಲಿದ್ದ ಪೊಲೀಸರು ಪ್ರತಿಭಟನಾಕಾರರನ್ನ ವಶಕ್ಕೆ ಪಡೆದರು.  ಇನ್ನು ಇತ್ತ ರಾಜ್ಯದಲ್ಲಿ ಇಬ್ಬರು ಪಕ್ಷೇತರ ಶಾಸಕರಿಗಾಗಿ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆಯಿತು. ಅತೃಪ್ತ ಶಾಸಕರು ವಾಸ್ತವ್ಯ ಹೂಡಿದ್ದ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ನಿತೇಶ್ ಅಪಾರ್ಟ್ ಮೆಂಟ್  ಬಳಿ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಎರಡು ಪಕ್ಷದ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು.

Key words: rebelMLA’s- stay -Protest – Congress activists- in front -hotel …