ಈಶ್ವರನ ಹೆಸರಿನಲ್ಲಿ ಕೇಜ್ರಿವಾಲ್ ಪ್ರಮಾಣ ವಚನ

ನವದೆಹಲಿ, ಫೆಬ್ರವರಿ 16, 2020 (www.justkannada.in): ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಅರವಿಂದ್ ಕೇಜ್ರಿವಾಲ್ ಸತತ ಮೂರನೇ ಬಾರಿಗೆ ದೆಹಲಿ ಮುಖ್ಯಮಂತ್ರಿಯಾಗಿ ಅರವಿಂದ್ ಕೇಜ್ರಿವಾಲ್ ಪ್ರಮಾಣವಚನ ಸ್ವೀಕರಿಸಿದರು.

ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ದೆಹಲಿಯ ಮುಖ್ಯಮಂತ್ರಿಯಾಗಿ ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ದೆಹಲಿಯ ಎಲ್ಲ ಶಾಸಕರು, ಶಾಲಾ ಮುಖ್ಯಸ್ಥರು, ಪ್ರಾಂಶುಪಾಲರು, ಪಠ್ಯಕ್ರಮ ಸಂಯೋಜಕರು, ಶಿಕ್ಷಕರ ಅಭಿವೃದ್ಧಿ ಸಂಯೋಜಕರು ಸೇರಿ 20 ಶಿಕ್ಷಕರು ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.