ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ನಿಂದ ಕಣ್ಣೊರೆಸುವ ಕೆಲಸ –ಕೇಂದ್ರ ಗೃಹ ಸಚಿವ ಅಮಿತ್ ಶಾ.

ಚಾಮರಾಜನಗರ,ಏಪ್ರಿಲ್,24,2023(www.justkannada.in): ಮುಸ್ಲಿಂ, ಎಸ್​.ಸಿ ಎಸ್​.ಟಿ ಸಮುದಾಯಕ್ಕೆ ಮೀಸಲಾತಿ ನೀಡಿದ್ದು ಬಿಜೆಪಿ ಸರ್ಕಾರ. ಆದರೆ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಕಣ್ಣೊರೆಸುವ ಕೆಲಸ ಮಾಡಿದೆ ಅಷ್ಟೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟೀಕಿಸಿದರು.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ರೋಡ್​ ಶೋ ನಡೆಸಿ ಮಾತನಾಡಿದ ಮಾತನಾಡಿದ ಅಮಿತ್ ಶಾ, ಮುಸ್ಲಿಂ ಹಾಗೂ ಎಸ್​ಸಿ ಎಸ್​ಟಿ ಸಮುದಾಯಕ್ಕೆ ಮೀಸಲಾತಿ ನೀಡಿರುವುದು ಬಿಜೆಪಿ ಸರ್ಕಾರ. ಕಾಂಗ್ರೆಸ್ ಸರ್ಕಾರ ಕೇವಲ ಕಣ್ಣೊರೆಸುವ ಕೆಲಸ ಮಾಡುತ್ತಾರೆ. ಕಾಂಗ್ರೆಸ್ ಪಕ್ಷ​ ಮುಸ್ಲಿಮರಿಗೆ ಶೇ 4ರ ಮೀಸಲಾತಿ ನೀಡಿತ್ತು. ಆದರೆ ಬಿಜೆಪಿ ಅದನ್ನ ತೆಗೆದು ಹಾಕಿದೆ. ಅಧಿಕಾರಕ್ಕೆ ಬಂದೇ ಬರುತ್ತೇವೆ, ಅಧಿಕಾರಕ್ಕೆ ಬಂದ ಮೇಲೆ ಮುಸ್ಲಿಮರಿಗಿರುವ ಮೀಸಲಾತಿಯನ್ನು ಕೊಡುತ್ತೇವೆ ಎಂಬುದಾಗಿ ಕಾಂಗ್ರೆಸ್​ ಅಧ್ಯಕ್ಷರು ಹೇಳಿದ್ದಾರೆ.  ಡಿಕೆ ಶಿವಕುಮಾರ್​ ಅವರೇ, ಮುಸ್ಲಿಮರಿಗೆ ಮೀಸಲಾತಿ ವಾಪಸ್​ ಕೊಡುವ ಬಗ್ಗೆ ಮಾತನಾಡುತ್ತಿದ್ದೀರಿ. ಅದಕ್ಕಾಗಿ ಯಾರಿಗೆ ಮೀಸಲಾತಿ ಕಡಿಮೆ ಮಾಡುತ್ತೀರಿ? ಕರ್ನಾಟಕದ ಜನರಿಗೆ ಉತ್ತರ ಕೊಡಿ. ಒಕ್ಕಲಿಗರದ್ದು ಕಡಿಮೆ ಮಾಡುತ್ತೀರಾ? ಲಿಂಗಾಯತರದ್ದು ಕಡಿಮೆ ಮಾಡುತ್ತೀರಾ? ಅಥವಾ ಎಸ್ .ಸಿ  ಮತ್ತು ​ಎಸ್ ಟಿ ಮೀಸಲಾತಿ ಕಡಿಮೆ ಮಾಡುತ್ತೀರಾ? ಎಂದು ಟಾಂಗ್ ನೀಡಿದರು.

ಸರ್ವರು  ಸಮೃದ್ಧಿಯಾಗಿರಬೇಕು ಅಂದರೆ ಬಿಜೆಪಿ ಸರ್ಕಾರ ಬರಬೇಕಿದೆ, ಈ ಬಾರಿ ನಿರಂಜನ್ ಕುಮಾರ್ ​ಗೆ ಆಶೀರ್ವಾದ ಮಾಡಿ ಮತ  ನೀಡಿ ಎಂದು ಅಮಿತ್ ಶಾ ಮನವಿ ಮಾಡಿದರು.

Key words: reservation-congress-Union Home Minister -Amit Shah-chamarajanagar