ಮೀಸಲಾತಿ ಬಹಳ ಸೂಕ್ಷ್ಮ ವಿಚಾರ: ಒತ್ತಾಯ ಮಾಡಬಾರದು- ಸಚಿವ ಸುಧಾಕರ್….

ಕಲ್ಬುರ್ಗಿ,ಫೆಬ್ರವರಿ,21,2021(www.justkannada.in): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಮುದಾಯದ ಸ್ವಾಮೀಜಿ,  ಸಮುದಾಯದ ಮುಖಂಡರು ಸಮಾವೇಶ ನಡೆಸುತ್ತಿದ್ದು ಸರ್ಕಾರಕ್ಕೆ ಒತ್ತಡ ಹಾಕುತ್ತಿದ್ದಾರೆ.jk

ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಮೀಸಲಾತಿ ಬಹಳ ಸೂಕ್ಷ್ಮ ವಿಚಾರವಾಗಿದೆ. ಹೀಗಾಗಿ ಸಮಯ ನಿಗದಿ ಮಾಡಿ ಒತ್ತಾಯ ಮಾಡಬಾರದು. ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲ್ಲ.  ಕಾನೂನು ತಜ್ಞರ ವರದಿ ಪಡೆದು ನ್ಯಾಯ ಒದಗಿಸಲಾಗುತ್ತದೆ ಎಂದು ತಿಳಿಸಿದರು.Reservation - very delicate- issue-Minister- Sudhakar.

ಹಾಗೆಯೇ ಮಹಾರಾಷ್ಟ್ರದಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ  ಈಗಾಗಲೇ ಕಲ್ಬುರ್ಗಿ ಜಿಲ್ಲಾಡಳಿತದ ಜತೆ ಮಾತನಾಡಿದ್ದೇನೆ. ಮಾರ್ಗಸೂಚಿ ಸಿದ್ಧರಪಡಿಸಲಾಗಿದೆ. ಸೋಂಕು ಹರಡದಂತೆ ಬಿಗಿ ಕ್ರಮ ಕೈಗೊಳ್ಳಲಾಗುತ್ತದೆ. ರಾಜ್ಯದಲ್ಲಿ ಲಾಕ್ ಡೌನ್ ಪ್ರಸ್ತಾಪ ಇಲ್ಲ ಎಂದು ಸಚಿವ ಸುಧಾಕರ್ ತಿಳಿಸಿದರು.

Key words: Reservation – very delicate- issue-Minister- Sudhakar.