“ಮೀಸಲಾತಿ ಬೇಡಿಕೆ: ಯಾವ ಸ್ವಾಮೀಜಿಗೂ ಆತಂಕ, ಸಂಶಯ ಬೇಡ” – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು,ಫೆಬ್ರವರಿ,14,2021(www.justkannada.in) : ಮೀಸಲಾತಿ ಸಂಬಂಧಿಸಿದಂತೆ ಕಾನೂನು ಚೌಕಟ್ಟಿನಲ್ಲಿ ಈಡೇರಿಸಲು ಕ್ರಮ ವಹಿಸಲಾಗುವುದು. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಈ ವಿಚಾರವಾಗಿ ಯಾವ ಸ್ವಾಮೀಜಿಯವರಿಗೂ ಆತಂಕ, ಸಂಶಯ ಬೇಡ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸವ್ಯಕ್ತಪಡಿಸಿದ್ದಾರೆ.jkಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿ, ಮೀಸಲಾತಿಗಾಗಿ ವಿವಿಧ ಸಮುದಾಯದ ಸ್ವಾಮಿಗಳು‌ ನಡೆಸುತ್ತಿರುವ ಹೋರಾಟ ನ್ಯಾಯಯುತವಾಗಿದ್ದು, ಯಾವ ರೀತಿ ಅದನ್ನು ಈಡೇರಿಸಬೇಕು ಎಂಬುದಷ್ಟೆ ಈಗ ಚರ್ಚೆ ಮಾಡಬೇಕಾಗಿದೆ ಎಂದಿದ್ದಾರೆ. Reservation-Demand-swamiji-No worries-no doubts-Chief Minister-B.S.Yadiyurappa-Confidence

ವೀರಶೈವ ಲಿಂಗಾಯತ, ವಾಲ್ಮೀಕಿ ಸೇರಿದಂತೆ ಹೋರಾಟ ನಿರತ ಎಲ್ಲಾ ಸಮಾಜದ ಸ್ವಾಮೀಜಿಗಳ ಬೇಡಿಕೆಯನ್ನು ಕಾನೂನು ಚೌಕಟ್ಟಿನಲ್ಲಿ ಈಡೇರಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

key words : Reservation-Demand-swamiji-No worries-no doubts-Chief Minister-B.S.Yadiyurappa-Confidence