ನಿವೃತ್ತ ವಾರ್ತಾಧಿಕಾರಿ ಕೆ.ಆರ್.ತೋಪೇಗೌಡ ನಿಧನ….

ಹಾಸನ,ಮಾರ್ಚ್,23,2021(www.justkannada.in): ನಿವೃತ್ತ ವಾರ್ತಾಧಿಕಾರಿ ಕೆ.ಆರ್.ತೋಪೇಗೌಡ (72) ಹೃದಯಾಘಾತದಿಂದ ಹಾಸನದಲ್ಲಿ ಸ್ವಗೃಹದಲ್ಲಿ ನಿಧನರಾದರು.jk

ಕಳೆದ 25 ವರ್ಷಗಳ ಕಾಲ ಹಾಸನ ಜಿಲ್ಲೆಯಲ್ಲಿ ವಿವಿಧ ಹುದ್ದೆಗಳಲ್ಲಿ ‌ಸೇವೆ ಸಲ್ಲಿಸಿದ್ದಾರೆ. 22 ವರ್ಷಗಳ ಕಾಲ ಜಿಲ್ಲಾ ವಾರ್ತಾಧಿಕಾರಿಯಾಗಿ  ಕೆ.ಆರ್.ತೋಪೇಗೌಡ ಸೇವೆ ಸಲ್ಲಿಸಿ 2006ರಲ್ಲಿ ನಿವೃತ್ತಿ ಹೊಂದಿದ್ದರು. ತೋಪೇಗೌಡ ಅವರು ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕುಡ್ಲೂರು ಗ್ರಾಮದವರು. ಮೃತರು, ಪತ್ನಿ ಮೂವರು ಪುತ್ರಿಯರು, ಅಳಿಯಂದಿರು ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ನಾಳೆ ಹಾಸನದಲ್ಲಿ ನಡೆಯಲಿದೆ.

ಕೆಯುಡಬ್ಲ್ಯೂಜೆ ಸಂತಾಪ:

ವಾರ್ತಾಧಿಕಾರಿಯಾಗಿ ಸುಧೀರ್ಘ ಅವಧಿಗೆ ಕೆಲಸ ಮಾಡಿದ್ದ ತೋಪೇಗೌಡ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ) ತೀವ್ರ ಸಂತಾಪ ವ್ಯಕ್ತಪಡಿಸಿದೆ.retired-journalist-kr-topegowda-passes-away

ಪತ್ರಕರ್ತರು, ಮಾಧ್ಯಮ  ಸ್ನೇಹಿಯಾಗಿ ನಡೆದುಕೊಂಡಿದ್ದ, ಸದಾ ಮಾನವೀಯತೆ ಸೇವಾ ಮನೋಭಾವದ ಅಧಿಕಾರಿಯಾಗಿದ್ದ ತೋಪೇಗೌಡ ಅವರ ನಿಧನದಿಂದ ಅಪರೂಪದ ಅಧಿಕಾರಿಯನ್ನು ಕಳೆದುಕೊಂಡಂತಾಗಿದೆ ಎಂದು ಕೆಯುಡಬ್ಲ್ಯೂಜೆ ಶೋಕ ವ್ಯಕ್ತಪಡಿಸಿದೆ.

Key words: Retired- journalist -KR Topegowda -passes away.