ಡಿ.ಕೆ ರವಿ ಪತ್ನಿಗೆ ಟಿಕೆಟ್ ವಿಚಾರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ…

ಬೆಳಗಾವಿ,ಅಕ್ಟೋಬರ್, 3,2020(www.justkannada.in): ಆರ್ ಆರ್ ನಗರ ಮತ್ತು ಶಿರಾ ಉಪಚುನಾವಣಾ ಕಣ ರಂಗೇರುತ್ತಿದ್ದು ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಈ ನಡುವೆ  ಡಿ.ಕೆ ರವಿ ಅವರ ಪತ್ನಿ ಕುಸುಮಾ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುವ ವಿಚಾರ ಸದ್ಧು ಮಾಡುತ್ತಿದೆ.jk-logo-justkannada-logo

ಈ ಬಗ್ಗೆ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಆರ್.ಆರ್ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ 7 ರಿಂದ 8 ಆಕಾಂಕ್ಷಿಗಳಿದ್ದಾರೆ. ಈ ನಡುವೆ ಕುಸುಮಾ ಅವರ ಹೆಸರನ್ನೂ ಶಿಫಾರಸ್ಸು ಮಾಡುತ್ತಿದ್ದಾರೆ. ಕೆಲವರು ಹಿರಿಯರಿಗೆ ಟಿಕೆಟ್ ನೀಡಿ ಎನ್ನುತ್ತಿದ್ದಾರೆ. ಆದರೆ ಈ ಬಗ್ಗೆ ನಾನು ಇನ್ನು ಚರ್ಚೆ ಮಾಡಿಲ್ಲ ಎಂದರು.rr-nagar-by-election-congress-tickets-dk-ravis-wife-kpcc-president-dk-shivakumar

ಆರ್ ಆರ್ ನಗರ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಮಾಜಿ ಸಚಿವ ರಾಮಲಿಂಗರೆಡ್ಡಿ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದ್ದೇವೆ. ಸಮಿತಿಲ್ಲಿ ಎಲ್ಲಾ ರೀತಿಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.

Key words: RR nagar –by election-congress-Tickets – DK Ravi’s –wife-KPCC –president-DK Shivakumar