ನನ್ನ ಗೆಲುವು ನಿಶ್ಚಿತ: ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ‘ಕೈ’ ಅಭ್ಯರ್ಥಿ ಕುಸುಮಾ…

ಮೈಸೂರು,ನವೆಂಬರ್,6,2020(www.justkannada.in):  ಆರ್.ಆರ್ ನಗರ ಮತ್ತು ಶಿರಾ ಕ್ಷೇತ್ರ ಉಪಚುನಾವಣೆಯ ಮತದಾನ ಮುಗಿದಿದ್ದು  ನವೆಂಬರ್ 10 ರಂದು ಫಲಿತಾಂಶ ಹೊರಬೀಳಲಿದೆ. ಈ ಮಧ್ಯೆ ಫಲಿತಾಂಶಕ್ಕೂ ಮುನ್ನ ಆರ್.ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ತಾಯಿ ಚಾಮುಂಡೇಶ್ವರಿ ಸನ್ನಿಧಿಗೆ ಆಗಮಿಸಿ ದರ್ಶನ ಪಡೆದಿದ್ದಾರೆ.jk-logo-justkannada-logo

ತಂದೆ ಹನುಮಂತಪ್ಪ ಜೊತೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ  ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು, ತಾಯಿ ಚಾಮುಂಡೇಶ್ವರಿ  ದರ್ಶನ ಪಡೆದರು. ಶಿರಬಾಗಿ ತಾಯಿಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಕುಸುಮಾ ಅವರಿಗೆ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಸಾಥ್ ನೀಡಿದರು.RR Nagar- congress candidate- Kusuma –visit- mysore- chamindi hills

ತಾಯಿ ಚಾಮುಂಡೇಶ್ವರಿ ದರ್ಶನದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಕುಸುಮಾ, ನನಗೆ ಗೆಲ್ಲುವ ಆತ್ಮವಿಶ್ವಾಸ‌ ಇದೆ. ಶೇಕಡವಾರು ಕಡಿಮೆ ಆಯ್ತೆಂಬ ಕಾರಣಕ್ಕೆ ಈ ವಿಶ್ವಾಸ ವ್ಯಕ್ತಪಡಿಸುತ್ತಿಲ್ಲ. ಜನರು ನನಗೆ ತೋರಿಸಿದ ಪ್ರೀತಿಯಿಂದ ಈ ವಿಶ್ವಾಸ ಮೂಡಿದೆ. ನಿಷ್ಪಕ್ಷಪಾತ ಚುನಾವಣೆ ನಡೆದಿದೆ. ನಾವು ಇದನ್ನೆ ಬಯಸಿದ್ದೆವು. ಎಲ್ಲಾ ಪಕ್ಷದ ಮತದಾರರು ನನಗೆ ಬೆಂಬಲ ನೀಡಿದ್ದಾರೆ. ನನ್ನ ಗೆಲುವು ನಿಶ್ಚಿತ. ಚುನಾವಣೆ ಫಲಿತಾಂಶದ ಬಳಿಕ ಉಳಿದ ಎಲ್ಲ ಮಾಹಿತಿಯನ್ನ ಜನರಿಗೆ ಹೇಳುತ್ತೇನೆ ಎಂದು ಹೇಳಿದರು.

Key words: RR Nagar- congress candidate- Kusuma –visit- mysore- chamindi hills