“ಫಿಟ್ ಇಂಡಿಯಾ ಸೈಕ್ಲಥಾನ್” ಜಾಗೃತಿ ಅಭಿಯಾನಕ್ಕೆ ಚಾಲನೆ…!

ಬೆಂಗಳೂರು,ಡಿಸೆಂಬರ್,20,2020(www.justkannada.in) : ಫಿಟ್ ಇಂಡಿಯಾ ಅಭಿಯಾ‌ನದ ಅಂಗವಾಗಿ ಇಂದು ಪಾಲಿಕೆ ಹಾಗೂ ಬೆಂಗಳೂರು ಸ್ಮಾರ್ಟ್ ಸಿಟಿ  ಸಹಯೋಗದೊಂದಿಗೆ ಆಯೋಜಿಸಿದ್ದ “ಫಿಟ್ ಇಂಡಿಯಾ ಸೈಕ್ಲಥಾನ್”ಗೆ  ಮಾನ್ಯ ಆಡಳಿತಗಾರರು ಹಾಗೂ ಮಾನ್ಯ ಆಯುಕ್ತರವರಿಂದ ಜಾಗೃತಿ ಅಭಿಯಾನ ಚಾಲನೆ ನೀಡಿದರು.Teachers,solve,problems,Government,bound,Minister,R.Ashok

ಕಬ್ಬನ್ ಪಾರ್ಕ್(ಹಡ್ಸನ್ ವೃತ್ತ)ದಿಂದ ಹಮ್ಮಿಕೊಂಡಿರುವ ಜಾಗೃತಿ ಅಭಿಯಾನಕ್ಕೆ ” ಫಿಟ್ ಇಂಡಿಯಾ ಸೈಕ್ಲಥಾನ್”ಗೆ ಚಾಲನೆ ನೀಡಲಾಯಿತು. ಇದೇ ಸಂದರ್ಭದಲ್ಲಿ ನಗರದಲ್ಲಿ ಕೋವಿಡ್ ವಾರಿಯರ್ಸ್ ಗಳಾಗಿ ಹಗಲಿರುಳು ಶ್ರಮಿಸಿದವರಿಗೆ ಗೌರವ ಸಲ್ಲಿಸಲಾಯಿತು.

ಈ ಸಂದರ್ಭ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಮಾತನಾಡಿ , ಪ್ರಧಾನಮಂತ್ರಿಗಳ ಕನಸಾಗಿರುವ ಪಿಟ್ ಇಂಡಿಯಾ ಅಭಿಯಾನದ ಅಂಗವಾಗಿ ಇಂದು ಪಾಲಿಕೆ ಹಾಗೂ ಬೆಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ಸೈಕ್ಲಥಾನ್ ಆಯೋಜನೆ ಮಾಡಲಾಗಿದೆ ಎಂದರು.

ಪ್ರತಿಯೊಬ್ಬ ನಾಗರಿಕರು ಆರೋಗ್ಯವಾಗಿ, ದೈಹಿಕವಾಗಿ ಸದೃಢವಾಗಿರಬೇಕಾದರೆ ಪ್ರತಿನಿತ್ಯ ದೈಹಿಕ ಶಿಕ್ಷಣ ಬಹಳ ಮುಖ್ಯವಾಗಿರುತ್ತದೆ. ಆದ್ದರಿಂದ, ಎಲ್ಲರೂ ಫಿಟ್ ಆಗಿರುವ ಮೂಲಕ ಆರೋಗ್ಯಕರವಾಗಿರಬೇಕು ಎಂದರು.

Running-"Fit India-Cyclathon-awareness-campaign ...!

ಅಲ್ಲದೆ, ನಗರದಲ್ಲಿ ಕೋವಿಡ್-19 ತಡೆಯಲು ಹಗಲಿರುಳು ಶ್ರಮಿಸಿದ ಸಾಕಷ್ಟು ಕೋವಿಡ್ ವಾರಿಯರ್ಸ್ ಗಳು ನಗರದಲ್ಲಿದ್ದಾರೆ. ಅವರಲ್ಲಿ  ಕೆಲವರನ್ನು ಗುರುತಿಸಿ ಇಂದು ಸನ್ಮಾನಿಸುತ್ತಿರುವುದು ಅಭಿನಂದನೀಯ ಎಂದರು.

ಪಿಟ್ ಇಂಡಿಯಾ ಅಂಗವಾಗಿ ಪಾಲಿಕೆ ವ್ಯಾಪ್ತಿಯಲ್ಲಿ ಬೆಂಗಳೂರು ಸ್ಮಾರ್ಟ್ ಸಿಟಿಯು ಕೋವಿಡ್-19 ವಾರಿಯರ್ಸ್ ಗಳಾಗಿ ಕಾರ್ಯನಿರ್ವಹಿಸುವ ವೈದ್ಯರು, ಸಂಚಾರಿ ವಿಭಾಗದ ಪೊಲೀಸರು ಹಾಗೂ ಮಾರ್ಷಲ್ ಗಳನ್ನು ಗುರುತಿಸಿ 2,000 ರೂ. ಪ್ರೋತ್ಸಾಹ ಗೌರವ ಮೊತ್ತ, ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಸೈಕ್ಲಥಾನ್ ಸಾಗಿದ ಮಾರ್ಗ : ಹಡ್ಸನ್ ವೃತ್ತ – ಚಿನ್ನಸ್ವಾಮಿ ಕ್ರೀಡಾಂಗಣದ ಕಸ್ತೂರಬಾ ರಸ್ತೆ(ಕ್ವೀನ್ಸ್ ರಸ್ತೆ) ಮೂಲಕ-ಜಿ.ಪಿ.ಒ ವೃತ್ತ-ರಾಜಭವನ ರಸ್ತೆ – ಚಾಲುಕ್ಯ ವೃತ್ತ – ಡಾ. ಬಿ.ಆರ್.ಅಂಬೇಡ್ಕರ್ ವೀಧಿ(ಎಂ.ಎಸ್.ಕಟ್ಟಡ ಮಾರ್ಗವಾಗಿ) – ಕೆ.ಆರ್.ವೃತ್ತ – ನೃಪತುಂಗ ರಸ್ತೆ ಮಾರ್ಗವಾಗಿ ಹಡ್ಸನ್ ವೃತ್ತಕ್ಕೆ ಸೈಕ್ಲಥಾನ್ ಪೂರ್ಣಗೊಂಡಿತು.

ಈ ವೇಳೆ ಬೆಂಗಳೂರು ಸ್ಮಾರ್ಟ್ ಸಿಟಿ ಲಿ. ವ್ಯವಸ್ಥಾಪಕ ನಿರ್ದೇಶಕರು ರಾಜೇಂದ್ರ ಚೋಳನ್, ಪೂರ್ವ ವಲಯ ಜಂಟಿ ಆಯುಕ್ತರಾದ ಪಲ್ಲವಿ, ಮುಖ್ಯ ಆರೋಗ್ಯಾಧಿಕಾರಿ ಡಾ.ವಿಜೇಂದ್ರ ಹಾಗೂ ಇನ್ನಿತರೆ ಸಂಚಾರ ವಿಭಾಗದ ಡಿಸಿಪಿ ನಾರಾಯಣ್ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

key words : Running-“Fit India-Cyclathon-awareness-campaign …!